12:36 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಅಂತರಗಂಗೆಯಲ್ಲಿ ಊಟಕನೂರ ಶ್ರೀಗಳ ಜಾತ್ರಾ ಮಹೋತ್ಸವ; ಮಹಿಳೆಯರಿಂದ ಮಂಗಳಾರತಿ

26/10/2021, 12:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಿರೇ ಅಂತರಗಂಗಿ ಗ್ರಾಮದ ಪ್ರತಿವರ್ಷದಂತೆ ಈ ವರ್ಷ ಉಟಕನೂರು ದೇಶಿಕೇಂದ್ರ ಮರಿ ಬಸವಲಿಂಗ ಶಿವಾಚಾರ್ಯರ ಆಶೀರ್ವಾದ ಮತ್ತು ನೇತೃತ್ವದಲ್ಲಿ ಮಸ್ಕಿ ಗಚ್ಚಿನ ಹಿರೇಮಠ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಆಶೀರ್ವಾದದಿಂದ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಪೂಜೆ ಅಭಿಷೇಕದೊಂದಿಗೆ ಜಾತ್ರಾ ಮಹೋತ್ಸವ ನಡೆಯಿತು.

ಈ ವರ್ಷವೂ ಪೂಜ್ಯರ ಸಮ್ಮುಖದಲ್ಲಿ ಬೆಳಿಗ್ಗೆ ರುದ್ರಾಭಿಷೇಕ, ಮಹಾಮಂಗಳಾರತಿ, ಅನ್ನಪ್ರಸಾದ ಕಾರ್ಯಕ್ರಮ ಜರುಗಿತು. ಭಕ್ತರು ತಮ್ಮ ಹರಕೆಗಳು ತೀರಿಸುತ್ತಾ ಉರುಳುಸೇವೆ, ಭಜನೆ ಮುಂತಾದವುಗಳನ್ನು ನೆರವೇರಿಸಿದರು.

ಸಂಜೆ ಜಂಗಮ ಸ್ವಾಮೀಜಿಗಳಿಂದ ಕಳಸ ಕನ್ನಡಿ ವಾದ್ಯಗಳೊಂದಿಗೆ ಜೈಕಾರ ಘೋಷ ಕೂಗುತ್ತಾ ಶ್ರೀಗಳ ಉತ್ಸವ ಅತಿ ಸರಳ ರೀತಿಯಲ್ಲಿ ಜರುಗಿತು. ಯಾವುದೇ ಕಿರಿಕಿರಿಯಿಲ್ಲದೆ ಭಜನೆ ಮೂಲಕ ತಾತನ ಜಾತ್ರಾ ಮಹೋತ್ಸವ ನಡೆಯಿತು. ರಾತ್ರಿ ಮಹಿಳೆಯರಿಂದ ಕಳಸ ಕನ್ನಡ ಮಂಗಳಾರತಿ ಜರುಗಿತು. ಈ ಕಾರ್ಯಕ್ರಮಕ್ಕೆ ಮ್ಯಾದರಾಳ ನಾಗರಬೆಂಚಿ ಮೆದಿಕಿನಾಳ ತಾಂಡ ಚೆನ್ನಮ್ಮನ ಹಟ್ಟಿ ಗೊಲ್ಲರಹಟ್ಟಿ ಗ್ರಾಮದಿಂದ ಭಕ್ತರು ಆಗಮಿಸಿದ್ದರು. ತಾತನ ಕೃಪೆಗೆ ಪಾತ್ರರಾಗಿ ಪುನೀತರಾದರು. 

ಇತ್ತೀಚಿನ ಸುದ್ದಿ

ಜಾಹೀರಾತು