3:24 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಅಂತರಗಂಗೆಯಲ್ಲಿ ಹೊಸ ದ್ಯಾವಮ್ಮ ಮೂರ್ತಿ  ಪ್ರತಿಷ್ಠಾಪನೆ: ಗ್ರಾಮಸ್ಥರಿಂದ ಭವ್ಯ ಮೆರವಣಿಗೆ

26/08/2021, 10:45

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಿರೇ ಅಂತರಗಂಗೆ ಗ್ರಾಮದಲ್ಲಿ ದ್ಯಾಮಮ್ಮ ಹೊಸ ಮೂರ್ತಿಯನ್ನು ಇಲಕಲ್ಲದಿಂದ ಬಾರಿ ವಿಜ್ರಂಭಣೆಯಿಂದ ಕಳಸ ಕನ್ನಡಿ, ಭಜನೆ ಬಾಜಿ ಡೊಳ್ಳು ಸಡಗರ ಸಂಭ್ರಮದಿಂದ ಅಂತರಗಂಗೆಗೆ ತರಲಾಯಿತು.

ಸುತ್ತಮುತ್ತಲ ಗ್ರಾಮಗಳಾದ ಮ್ಯಾದರಾಳ ಹಟ್ಟಿ , ಮೆದಿಕಿನಾಳ, ಬೈಲ್ ಗುಡ್ಡ, ನಾಗರಬೆಂಚಿ, ಅಂತರಗಂಗೆ ತಾಂಡಾ ಗ್ರಾಮಸ್ಥರಿಂದ ಟ್ರ್ಯಾಕ್ಟರ್ ನಲ್ಲಿ ಭವ್ಯ ಮೆರವಣಿಗೆ ಮೂಲಕ ಜೈಕಾರ ಹಾಕುತ್ತಾ ದ್ಯಾಮಮ್ಮ ಮೂರ್ತಿಯನ್ನು ತರಲಾಯಿತು.
ದ್ಯಾಮಮ್ಮ ದೇವಿಗೆ ಪಾರ್ವತಮ್ಮ ಕಾವಲಿ ಅವರ ಪೂಜಾರಿಯಾಗಿದ್ದು, ಅವರು ನಿಧನ ಬಳಿಕ ಅವರ ಕುಟುಂಬದವರ ಸೊಸೆ ಗುಡಿ ಪೂಜೆ ಪೂಜಾರಿ ವ್ಯವಸ್ಥೆಯ ನೋಡಿಕೊಂಡು ಬರುತ್ತಿದ್ದಾರೆ. ದೂರದ ಊರಾದ ಬಳ್ಳಾರಿ, ಸಿರುಗುಂಪ, ದಢೆಸುಗುರ್,ಮುದುಗಲ್,ಲಿಂಗಸುಗೂರು ಮುಂತಾದ ಕಡೆಗಳಿಂದ ಭಕ್ತರು ದ್ಯಾಮಮ್ಮ ಗುಡಿಗೆ ದರ್ಶನ ಮಾಡಲು ಆಗಮಿಸುತ್ತಾರೆ. ಕುಷ್ಟಗಿ ಶಾಸಕರು ಅಮರೇಗೌಡ ಪಾಟೀಲ್ ಬಯ್ಯಪೂರ್ ಅನುದಾನದಲ್ಲಿ ಗುಡಿ ಕಟ್ಟಡ ನಿರ್ಮಿಸಲಾಗಿದೆ. ಮಾಜಿ ಶಾಸಕ ಪ್ರತಾಪ ಗೌಡರು ಅನುದಾನ ಕೊಟ್ಟಿದ್ದರು. 

ಮಂಗಳಾರತಿ, ಭಜನೆ, ಡೊಳ್ಳು ಕುಣಿತದೊಂದಿಗೆ ಅಮ್ಮನನ್ನು ಗುಡಿ ಒಳಗೆ ಕರೆತರಲಾಯಿತು. ಭಕ್ತರು ಸುತ್ತಮುತ್ತಲಿನ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಗುರಪ್ಪ ಗೋಮರ್ಸಿ, ವೀರೇಶ್ ಚಿಕ್ಕ ಅಂತರಗಂಗೆ ಗವಿಯಪ್ಪ ಗೌಡ, ದುರ್ಗಣ್ಣ ಕುರ್ಲಿ,ಈರಣ್ಣ ಕುರ್ಲಿ , ವಾಲ್ಮೀಕಿ ಸಮಾಜ ಯುವ ಮಿತ್ರರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು