11:06 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಅಂತರಗಂಗೆಯಲ್ಲಿ ಊಟಕನೂರ ಶ್ರೀಗಳ ಜಾತ್ರಾ ಮಹೋತ್ಸವ; ಮಹಿಳೆಯರಿಂದ ಮಂಗಳಾರತಿ

26/10/2021, 12:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಿರೇ ಅಂತರಗಂಗಿ ಗ್ರಾಮದ ಪ್ರತಿವರ್ಷದಂತೆ ಈ ವರ್ಷ ಉಟಕನೂರು ದೇಶಿಕೇಂದ್ರ ಮರಿ ಬಸವಲಿಂಗ ಶಿವಾಚಾರ್ಯರ ಆಶೀರ್ವಾದ ಮತ್ತು ನೇತೃತ್ವದಲ್ಲಿ ಮಸ್ಕಿ ಗಚ್ಚಿನ ಹಿರೇಮಠ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಆಶೀರ್ವಾದದಿಂದ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಪೂಜೆ ಅಭಿಷೇಕದೊಂದಿಗೆ ಜಾತ್ರಾ ಮಹೋತ್ಸವ ನಡೆಯಿತು.

ಈ ವರ್ಷವೂ ಪೂಜ್ಯರ ಸಮ್ಮುಖದಲ್ಲಿ ಬೆಳಿಗ್ಗೆ ರುದ್ರಾಭಿಷೇಕ, ಮಹಾಮಂಗಳಾರತಿ, ಅನ್ನಪ್ರಸಾದ ಕಾರ್ಯಕ್ರಮ ಜರುಗಿತು. ಭಕ್ತರು ತಮ್ಮ ಹರಕೆಗಳು ತೀರಿಸುತ್ತಾ ಉರುಳುಸೇವೆ, ಭಜನೆ ಮುಂತಾದವುಗಳನ್ನು ನೆರವೇರಿಸಿದರು.

ಸಂಜೆ ಜಂಗಮ ಸ್ವಾಮೀಜಿಗಳಿಂದ ಕಳಸ ಕನ್ನಡಿ ವಾದ್ಯಗಳೊಂದಿಗೆ ಜೈಕಾರ ಘೋಷ ಕೂಗುತ್ತಾ ಶ್ರೀಗಳ ಉತ್ಸವ ಅತಿ ಸರಳ ರೀತಿಯಲ್ಲಿ ಜರುಗಿತು. ಯಾವುದೇ ಕಿರಿಕಿರಿಯಿಲ್ಲದೆ ಭಜನೆ ಮೂಲಕ ತಾತನ ಜಾತ್ರಾ ಮಹೋತ್ಸವ ನಡೆಯಿತು. ರಾತ್ರಿ ಮಹಿಳೆಯರಿಂದ ಕಳಸ ಕನ್ನಡ ಮಂಗಳಾರತಿ ಜರುಗಿತು. ಈ ಕಾರ್ಯಕ್ರಮಕ್ಕೆ ಮ್ಯಾದರಾಳ ನಾಗರಬೆಂಚಿ ಮೆದಿಕಿನಾಳ ತಾಂಡ ಚೆನ್ನಮ್ಮನ ಹಟ್ಟಿ ಗೊಲ್ಲರಹಟ್ಟಿ ಗ್ರಾಮದಿಂದ ಭಕ್ತರು ಆಗಮಿಸಿದ್ದರು. ತಾತನ ಕೃಪೆಗೆ ಪಾತ್ರರಾಗಿ ಪುನೀತರಾದರು. 

ಇತ್ತೀಚಿನ ಸುದ್ದಿ

ಜಾಹೀರಾತು