3:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಅಂತರ್‌ರಾಜ್ಯ ಮರಳು ಮಾಫಿಯಾ: ಅಥಣಿಯಿಂದ ಮಹಾರಾಷ್ಟಕ್ಕೆ ಅಕ್ರಮ ಸಾಗಾಟ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು

21/11/2021, 17:02

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಅಬ್ಬಿಹಾಳ್ ಮಾಯಣಟ್ಟಿಯಲ್ಲಿ ಹಗಲು ಮರಳು ದರೋಡೆ ನಡೆಯುತ್ತಿದ್ದು, ಅಧಿಕಾರಿಗಳು ಜಾಣ ಮೌನಕ್ಕೆ ಶರಣಾಗಿದ್ದಾರೆ. 

ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದ ಮಾಹಿತಿ ನೀಡಿದರೂ   ತಾಲೂಕು ದಂಡಾಧಿಕಾರಿ  ದುಂಡಪ್ಪ ಕೋಮಾರ ಅವರು ಸ್ಥಳಕ್ಕೆ ಆಗಮಿಸಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿ ಗಮನಕ್ಕೂ ತಂದರು ಅವರು ಕೂಡ ಸುಮ್ಮನಿರೋದನ್ನ ಕಂಡರೆ ಲಂಚಕ್ಕೆ ಒಳಗಾಗಿದ್ದಾರೆನೋ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಉದ್ಭವಿಸಿದೆ.ಹಲವು ತಿಂಗಳುಗಳಿಂದ ಅಕ್ರಮ ಮರಳು ಸಾಗಾಟವಾಗುತ್ತಿದ್ದು, ಮರಳುಕೊರರಿಗೆ ನೇರವಾಗಿ ಸಾಥ್ ನೀಡುತ್ತಿದ್ದಾರಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯಗಳಲ್ಲಿ ಚರ್ಚೆಯಾಗುತ್ತಿದೆ.

ಹಾಡಹಗಲಿನಲ್ಲೇ ಮಹಾರಾಷ್ಟಕ್ಕೆಕರ್ನಾಟಕದ ಭೂ ಸಂಪತ್ತು ಅಕ್ರಮವಾಗಿ ಪೋಲ್ ಆಗುತ್ತಿದ್ದರು ಅಧಿಕಾರಿಗಳು ಕಂಡು ಕಾಣದ ಹಾಗೆ ಸುಮ್ಮನಿದ್ದನ್ನ ಕಂಡರೆ ಇಲ್ಲಿ ಮರಳು ಮಾಫಿಯಾ ಎಷ್ಟೊಂದು 

ಬಲಿಷ್ಠವಾಗಿದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುತ್ತಿದೆ ಎಂದು ಸ್ಥಳೀಯರಾದ ಮಯೂರ ಸಿಂಗರು ಅಭಿಪ್ರಾಯಪಡುತ್ತಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅಬ್ಬಿಹಾಳ ಮಾಯಣಟ್ಟಿ, ಶಿವನೂರ, ಸಂಬರಗಿ, ನಾಗನೂರ,

ತಂವಶಿ, ಕಲ್ಲೂತಿ, ಶಿರೂರ ಗ್ರಾಮಗಳಲ್ಲಿ ಹಾದು ಹೋಗುವ ಆಗ್ರಾನಿ ನದಿಯಲ್ಲಿ ಸುಮಾರು ವರ್ಷಗಳಿಂದ ಮೌಲ್ಯವಿತವಾದ ಮಣ್ಣು ಹಾಗೂ ಮರಳು ನೆರೆ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡಿ ಸರಕಾರದ ಬೊಕ್ಕಸಕ್ಕೆ ಇನ್ನಿಲ್ಲದ ನಷ್ಟ

ಉಂಟು ಮಾಡುತ್ತಿದ್ದರು ಅಧಿಕಾರಿಗಳು ಮಾತ್ರ

ಮೌನಿಯಾಗಿರುವುದು ಆಘಾತವೇ ಸರಿ.

ಸರಕಾರದ ಖಜಾನೆಯಲ್ಲಿ ಹಣವಿಲ್ಲದೆ ಸಾಕಷ್ಟು ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಕೆಲವು ಇಲಾಖೆಯ ನೌಕರರ ಸಂಬಳ ಕೂಡ ಆಗಿಲ್ಲ.

ಸದ್ಯದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರು ಅರ್ಧ ಸಂಬಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಮಾಡುವಂತಹ ಭ್ರಷ್ಟ ಮಾಫಿಯಾ ಕೊರರ ಹೆಡೆಮುರಿಕಟ್ಟಲು ಸರ್ಕಾರ ಯಾವ ನಿಯಮ ಜಾರಿಗೆ ತರುತ್ತದೆ ಅನ್ನೋದನ್ನ ಕಾದುನೋಡಬೇಕಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಮಹದೇವ್ ಮಡಿವಾಳ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು