9:53 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದ ಹಿಂದುಗಳಿಗೆ ನ್ಯಾಯ ದೊರಕಿಸಿ: ಕುಂದಾಪುರ ಬಿಜೆಪಿ ಪ್ರತಿಭಟನೆಯಲ್ಲಿ ಆಗ್ರಹ

24/10/2021, 09:29

ಕುಂದಾಪುರ(reporterkarnataka.com): ನಾವು ಕೊಟ್ಟ ಭಿಕ್ಷೆ ಜಾಸ್ತಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಲ್ಲೆ, ಅತ್ಯಾಚಾರಗಳು ನಡೆಯುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿದರು.

ಶನಿವಾರ ಯುವ ಬ್ರಿಗೇಡ್ ಕುಂದಾಪುರ ವತಿಯಿಂದ ನಡೆದ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನವರಾತ್ರಿಯ ದುರ್ಗಾ ಪೂಜೆಯ ದಿನದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ, ಹಿಂದು ಮಂದಿರಗಳನ್ನು ಧ್ವಂಸ ಮಾಡಿದ್ದಾರೆ. ಎಲ್ಲೆಲ್ಲಿ ಹಿಂದುಗಳ ಮನೆ ಇದೆಯೋ ಅಲ್ಲೆಲ್ಲಾ ಇಸ್ಲಾಂ ಜಿಹಾದಿಗಳು ಮನೆಗೆ ನುಗ್ಗಿ ಹಿಂದು ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡಿ ಮನೆಗಳನ್ನು ಧ್ವಂಸ ಮಾಡಿದ್ದಾರೆ‌. ಆ ದೇಶದ ಹಿಂದುಗಳಿಗೆ ಸಾಂತ್ವಾನ ಹೇಳಲು ಭಾರತದಲ್ಲಿ ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆಯನ್ನು ನಡೆಸುತ್ತಿದ್ದೇವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದೇಶದ ಹಿಂದುಗಳಿಗೆ ನ್ಯಾಯ ದೊರಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಪ್ರಭಾಕರ್, ಸಂತೋಷ್ ಶೆಟ್ಟಿ ಜಿಕೆ ಗಿರೀಶ್, ಭಜರಂಗದಳ ಮುಖಂಡ ಗಿರೀಶ್ ಕುಂದಾಪುರ, ಶೇಖರ್ ಪೂಜಾರಿ, ರತ್ನಾಕರ್ ಕುಂದಾಪುರ, ರಾಜೇಶ್ ಕಡಿಗೆ ಮನೆ ಪ್ರದೀಪ್ ಬಸ್ರೂರು, ನಿರಂಜನ್, ಸತೀಶ್ ಶೆಟ್ಟಿ, ಸುನಿಲ್ ಕುಮಾರ್,ಸುರೇಂದ್ರ ಸಂಗಮ್, ಕರಣ್ ಉಪ್ಪಿನಕುದ್ರು, ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ನಗರದ ಶಾಸ್ತ್ರಿ ಸರ್ಕಲ್ ನಿಂದ ಪ್ರಾರಂಭವಾದ ಪಂಜಿನ ಮೆರವಣೆಗೆ ನಗರದಾದ್ಯಂತ ಸಂಚರಿಸಿ ಶಾಸ್ತ್ರಿ ವೃತ್ತದಲ್ಲಿ ಕೊನೆಗೊಂಡಿತು

ಇತ್ತೀಚಿನ ಸುದ್ದಿ

ಜಾಹೀರಾತು