5:48 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದ ಹಿಂದುಗಳಿಗೆ ನ್ಯಾಯ ದೊರಕಿಸಿ: ಕುಂದಾಪುರ ಬಿಜೆಪಿ ಪ್ರತಿಭಟನೆಯಲ್ಲಿ ಆಗ್ರಹ

24/10/2021, 09:29

ಕುಂದಾಪುರ(reporterkarnataka.com): ನಾವು ಕೊಟ್ಟ ಭಿಕ್ಷೆ ಜಾಸ್ತಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಲ್ಲೆ, ಅತ್ಯಾಚಾರಗಳು ನಡೆಯುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿದರು.

ಶನಿವಾರ ಯುವ ಬ್ರಿಗೇಡ್ ಕುಂದಾಪುರ ವತಿಯಿಂದ ನಡೆದ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನವರಾತ್ರಿಯ ದುರ್ಗಾ ಪೂಜೆಯ ದಿನದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ, ಹಿಂದು ಮಂದಿರಗಳನ್ನು ಧ್ವಂಸ ಮಾಡಿದ್ದಾರೆ. ಎಲ್ಲೆಲ್ಲಿ ಹಿಂದುಗಳ ಮನೆ ಇದೆಯೋ ಅಲ್ಲೆಲ್ಲಾ ಇಸ್ಲಾಂ ಜಿಹಾದಿಗಳು ಮನೆಗೆ ನುಗ್ಗಿ ಹಿಂದು ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡಿ ಮನೆಗಳನ್ನು ಧ್ವಂಸ ಮಾಡಿದ್ದಾರೆ‌. ಆ ದೇಶದ ಹಿಂದುಗಳಿಗೆ ಸಾಂತ್ವಾನ ಹೇಳಲು ಭಾರತದಲ್ಲಿ ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆಯನ್ನು ನಡೆಸುತ್ತಿದ್ದೇವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದೇಶದ ಹಿಂದುಗಳಿಗೆ ನ್ಯಾಯ ದೊರಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಪ್ರಭಾಕರ್, ಸಂತೋಷ್ ಶೆಟ್ಟಿ ಜಿಕೆ ಗಿರೀಶ್, ಭಜರಂಗದಳ ಮುಖಂಡ ಗಿರೀಶ್ ಕುಂದಾಪುರ, ಶೇಖರ್ ಪೂಜಾರಿ, ರತ್ನಾಕರ್ ಕುಂದಾಪುರ, ರಾಜೇಶ್ ಕಡಿಗೆ ಮನೆ ಪ್ರದೀಪ್ ಬಸ್ರೂರು, ನಿರಂಜನ್, ಸತೀಶ್ ಶೆಟ್ಟಿ, ಸುನಿಲ್ ಕುಮಾರ್,ಸುರೇಂದ್ರ ಸಂಗಮ್, ಕರಣ್ ಉಪ್ಪಿನಕುದ್ರು, ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ನಗರದ ಶಾಸ್ತ್ರಿ ಸರ್ಕಲ್ ನಿಂದ ಪ್ರಾರಂಭವಾದ ಪಂಜಿನ ಮೆರವಣೆಗೆ ನಗರದಾದ್ಯಂತ ಸಂಚರಿಸಿ ಶಾಸ್ತ್ರಿ ವೃತ್ತದಲ್ಲಿ ಕೊನೆಗೊಂಡಿತು

ಇತ್ತೀಚಿನ ಸುದ್ದಿ

ಜಾಹೀರಾತು