2:04 AM Tuesday17 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ…

ಇತ್ತೀಚಿನ ಸುದ್ದಿ

ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ

23/09/2021, 07:48

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ್ಲಿ  ಮೂರು ಕರಡಿಗಳು ಮೃತಪಟ್ಟಿರುವ ಘಟನೆಗಳು ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.

ಕರಡಿ ಧಾಮ ನಿರ್ಮಾಣವಾಗಿದ್ದರೂ ಕೂಡ ಈ ರೀತಿ ವನ್ಯ ಪ್ರಾಣಿಗಳ ಸಾವಿನ ಪ್ರಕರಣಗಳು ಆಗಾಗ್ಗೆ ಜರುಗುತ್ತಿದ್ದು, ಈ ಅಹಿತಕರ ಬೆಳವಣಿಗೆ  ಹತ್ತಾರು ಅನುಮಾನಗಳು ಮೂಡುತ್ತಿವೆ. ಜಿಲ್ಲಾಡಳಿತ ಶೀಘ್ರವೇ ತನಿಖೆ ನಡೆಸಬೇಕು ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಶೀಘ್ರವೇ ಹಮ್ಮಿಕೊಳ್ಳುಬೇಕೆಂದು ಭಾರತ ಕಮ್ಯೂನಿಷ್ಟ್ ಪಕ್ಷದ ಕಾರ್ಯದರ್ಶಿ ಎಚ್.ವೀರಣ್ಣ ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಅಮ್ಮನಕೇರಿ ಗ್ರ‍ಾಮಸ್ಥರು ಹಾಗೂ ಮೊರಬನಹಳ್ಳಿ ಸದಸ್ಯ ಕರಿಯಪ್ಪ ಹಾಗೂ ಗ್ರಾಮದ ಮುಖಂಡರು, ತಾಲೂಕಿನ ವಿವಿದ ಸಂಘಟನೆಗಳ ಪದಾಧಿಕಾರಿಗಳು ಈ ಮೂಲಕ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು