3:41 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ

23/09/2021, 07:48

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ್ಲಿ  ಮೂರು ಕರಡಿಗಳು ಮೃತಪಟ್ಟಿರುವ ಘಟನೆಗಳು ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.

ಕರಡಿ ಧಾಮ ನಿರ್ಮಾಣವಾಗಿದ್ದರೂ ಕೂಡ ಈ ರೀತಿ ವನ್ಯ ಪ್ರಾಣಿಗಳ ಸಾವಿನ ಪ್ರಕರಣಗಳು ಆಗಾಗ್ಗೆ ಜರುಗುತ್ತಿದ್ದು, ಈ ಅಹಿತಕರ ಬೆಳವಣಿಗೆ  ಹತ್ತಾರು ಅನುಮಾನಗಳು ಮೂಡುತ್ತಿವೆ. ಜಿಲ್ಲಾಡಳಿತ ಶೀಘ್ರವೇ ತನಿಖೆ ನಡೆಸಬೇಕು ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಶೀಘ್ರವೇ ಹಮ್ಮಿಕೊಳ್ಳುಬೇಕೆಂದು ಭಾರತ ಕಮ್ಯೂನಿಷ್ಟ್ ಪಕ್ಷದ ಕಾರ್ಯದರ್ಶಿ ಎಚ್.ವೀರಣ್ಣ ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಅಮ್ಮನಕೇರಿ ಗ್ರ‍ಾಮಸ್ಥರು ಹಾಗೂ ಮೊರಬನಹಳ್ಳಿ ಸದಸ್ಯ ಕರಿಯಪ್ಪ ಹಾಗೂ ಗ್ರಾಮದ ಮುಖಂಡರು, ತಾಲೂಕಿನ ವಿವಿದ ಸಂಘಟನೆಗಳ ಪದಾಧಿಕಾರಿಗಳು ಈ ಮೂಲಕ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು