12:33 PM Saturday8 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ

23/09/2021, 07:48

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ್ಲಿ  ಮೂರು ಕರಡಿಗಳು ಮೃತಪಟ್ಟಿರುವ ಘಟನೆಗಳು ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.

ಕರಡಿ ಧಾಮ ನಿರ್ಮಾಣವಾಗಿದ್ದರೂ ಕೂಡ ಈ ರೀತಿ ವನ್ಯ ಪ್ರಾಣಿಗಳ ಸಾವಿನ ಪ್ರಕರಣಗಳು ಆಗಾಗ್ಗೆ ಜರುಗುತ್ತಿದ್ದು, ಈ ಅಹಿತಕರ ಬೆಳವಣಿಗೆ  ಹತ್ತಾರು ಅನುಮಾನಗಳು ಮೂಡುತ್ತಿವೆ. ಜಿಲ್ಲಾಡಳಿತ ಶೀಘ್ರವೇ ತನಿಖೆ ನಡೆಸಬೇಕು ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಶೀಘ್ರವೇ ಹಮ್ಮಿಕೊಳ್ಳುಬೇಕೆಂದು ಭಾರತ ಕಮ್ಯೂನಿಷ್ಟ್ ಪಕ್ಷದ ಕಾರ್ಯದರ್ಶಿ ಎಚ್.ವೀರಣ್ಣ ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಅಮ್ಮನಕೇರಿ ಗ್ರ‍ಾಮಸ್ಥರು ಹಾಗೂ ಮೊರಬನಹಳ್ಳಿ ಸದಸ್ಯ ಕರಿಯಪ್ಪ ಹಾಗೂ ಗ್ರಾಮದ ಮುಖಂಡರು, ತಾಲೂಕಿನ ವಿವಿದ ಸಂಘಟನೆಗಳ ಪದಾಧಿಕಾರಿಗಳು ಈ ಮೂಲಕ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು