3:06 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅನುಮಾನಾಸ್ಪದವಾಗಿ ಅಪ್ರಾಪ್ತ ಬಾಲಕಿ ಸಾವು: ತನಿಖೆ ನಡೆಸುವಂತೆ ಬಣಕಲ್ ಠಾಣೆಗೆ ಸಂಬಂಧಿಕರ ದೂರು

12/02/2022, 08:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದು, ಸಾವು ಅನುಮಾನಸ್ಪದವಾಗಿದೆ ಎಂದು ಯುವತಿಯ ಸಂಬಂಧಿಕರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ.

ಬಣಕಲ್ ಠಾಣಾ ವ್ಯಾಪ್ತಿಯ ಹೆಬ್ರಿಗೆ ಗ್ರಾಮದಲ್ಲಿ ಘಟನೆ  ನಡೆದಿದ್ದು ಕೆ.ಆರ್. ದೀಕ್ಷಾ (17) ಮೃತಪಟ್ಟ ಯುವತಿ. ಸಕಲೇಶಪುರ ತಾಲ್ಲೂಕಿನ ಕೊಗರಹಳ್ಳಿ ಮೂಲದ ದೀಕ್ಷಾ ಬಣಕಲ್ ಸಮೀಪದ ಹೆಬ್ರಿಗೆ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಚಿಕ್ಕಮಗಳೂರಿನ ಕಾಲೇಜಿಗೆ ಹೋಗುತ್ತಿದ್ದಳು. ಶುಕ್ರವಾರ ಕಾಲೇಜಿಗೆ ರಜೆ ಇದ್ದುದ್ದರಿಂದ ದೀಕ್ಷಾ ಮನೆಯಲ್ಲಿ ಇದ್ದಳು. ಶುಕ್ರವಾರ ಮನೆಯವರು ಮನೆಗೆ ಬಂದು ನೋಡಿದಾಗ ದೀಕ್ಷಾ ಮೃತದೇಹ ನೇಣು ಬಿಗಿದ  ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮೃತಳ ಸಂಬಂಧಿಕರಾದ ಅಣ್ಣಪ್ಪ ಬಣಕಲ್ ಠಾಣೆಗೆ ದೂರು ನೀಡಿದ್ದು ದೀಕ್ಷಾ ಸಾವಿನ ಬಗ್ಗೆ ಅನುಮಾನಗಳಿದ್ದು ತನಿಖೆ ನಡೆಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. 

ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು