5:16 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಅನುಮಾನಾಸ್ಪದವಾಗಿ ಅಪ್ರಾಪ್ತ ಬಾಲಕಿ ಸಾವು: ತನಿಖೆ ನಡೆಸುವಂತೆ ಬಣಕಲ್ ಠಾಣೆಗೆ ಸಂಬಂಧಿಕರ ದೂರು

12/02/2022, 08:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದು, ಸಾವು ಅನುಮಾನಸ್ಪದವಾಗಿದೆ ಎಂದು ಯುವತಿಯ ಸಂಬಂಧಿಕರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ.

ಬಣಕಲ್ ಠಾಣಾ ವ್ಯಾಪ್ತಿಯ ಹೆಬ್ರಿಗೆ ಗ್ರಾಮದಲ್ಲಿ ಘಟನೆ  ನಡೆದಿದ್ದು ಕೆ.ಆರ್. ದೀಕ್ಷಾ (17) ಮೃತಪಟ್ಟ ಯುವತಿ. ಸಕಲೇಶಪುರ ತಾಲ್ಲೂಕಿನ ಕೊಗರಹಳ್ಳಿ ಮೂಲದ ದೀಕ್ಷಾ ಬಣಕಲ್ ಸಮೀಪದ ಹೆಬ್ರಿಗೆ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಚಿಕ್ಕಮಗಳೂರಿನ ಕಾಲೇಜಿಗೆ ಹೋಗುತ್ತಿದ್ದಳು. ಶುಕ್ರವಾರ ಕಾಲೇಜಿಗೆ ರಜೆ ಇದ್ದುದ್ದರಿಂದ ದೀಕ್ಷಾ ಮನೆಯಲ್ಲಿ ಇದ್ದಳು. ಶುಕ್ರವಾರ ಮನೆಯವರು ಮನೆಗೆ ಬಂದು ನೋಡಿದಾಗ ದೀಕ್ಷಾ ಮೃತದೇಹ ನೇಣು ಬಿಗಿದ  ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮೃತಳ ಸಂಬಂಧಿಕರಾದ ಅಣ್ಣಪ್ಪ ಬಣಕಲ್ ಠಾಣೆಗೆ ದೂರು ನೀಡಿದ್ದು ದೀಕ್ಷಾ ಸಾವಿನ ಬಗ್ಗೆ ಅನುಮಾನಗಳಿದ್ದು ತನಿಖೆ ನಡೆಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. 

ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು