10:24 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಅನುಮತಿ ಇಲ್ಲದೆ ರಸ್ತೆ ತಡೆದು ಪ್ರತಿಭಟನೆ: 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

23/09/2022, 23:43

ಉಡುಪಿ(reporterkarnataka.com):
ಪೊಲೀಸರ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾದೀಕ್‌ ಅಹಮ್ಮದ್‌ (40), ಅಫ್ರೋಜ್‌ ಕೆ (39), ಇಲಿಯಾಸ್‌ ಸಾಹೇಬ್‌(46), ಇರ್ಷಾದ್‌ (37), ಫಯಾಜ್‌ ಅಹಮ್ಮದ್‌(39), ಮಹಮ್ಮದ್‌ ಅಶ್ರಫ್‌(43), ಎ. ಹಾರೂನ್‌ ರಶೀದ್‌, ಮೊಹಮ್ಮದ್‌ ಜುರೈಜ್‌ (42), ಇಶಾಕ್‌ ಕಿದ್ವಾಯಿ (30), ಶೌಕತ್‌ಅಲಿ (31) ಹಾಗೂ ಮಹಮ್ಮದ್‌ ಝಹೀದ್‌(24) ಎಂಬವರನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

ಉಡುಪಿಯ ಡಯಾನಾ ಸರ್ಕಲ್ ಬಳಿ ಪಿಎಫ್ ಐ ಸಂಘಟನೆಗಳ ಕಚೇರಿ ಹಾಗೂ ಮನೆಗಳ ಮೇಲೆ ಎನ್ಐಎ ದಾಳಿಯನ್ನು ಖಂಡಿಸಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಅನುಮತಿ ಇಲ್ಲದೆ ರಸ್ತೆ ತಡೆದು ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡಿದ್ದು, ಸ್ಥಳಕ್ಕೆ ತೆರಳಿದ ಉಡುಪಿ ನಗರ ಠಾಣೆ ಪೊಲೀಸರು ಯಾವುದೇ ಪರವಾನಿಗೆ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ಸ್ಥಳದಿಂದ ಹೋಗಲು ಸೂಚನೆ ನೀಡಿದ್ದಾರೆ. ಆದರೆ, ಕಾರ್ಯಕರ್ತರು ಸ್ಥಳದಿಂದ ತೆರಳದಿದ್ದಾಗ 11 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಮುಂದಿನ ವಿಚಾರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು