6:27 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅನುಮತಿ ಇಲ್ಲದೆ ರಸ್ತೆ ತಡೆದು ಪ್ರತಿಭಟನೆ: 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

23/09/2022, 23:43

ಉಡುಪಿ(reporterkarnataka.com):
ಪೊಲೀಸರ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾದೀಕ್‌ ಅಹಮ್ಮದ್‌ (40), ಅಫ್ರೋಜ್‌ ಕೆ (39), ಇಲಿಯಾಸ್‌ ಸಾಹೇಬ್‌(46), ಇರ್ಷಾದ್‌ (37), ಫಯಾಜ್‌ ಅಹಮ್ಮದ್‌(39), ಮಹಮ್ಮದ್‌ ಅಶ್ರಫ್‌(43), ಎ. ಹಾರೂನ್‌ ರಶೀದ್‌, ಮೊಹಮ್ಮದ್‌ ಜುರೈಜ್‌ (42), ಇಶಾಕ್‌ ಕಿದ್ವಾಯಿ (30), ಶೌಕತ್‌ಅಲಿ (31) ಹಾಗೂ ಮಹಮ್ಮದ್‌ ಝಹೀದ್‌(24) ಎಂಬವರನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

ಉಡುಪಿಯ ಡಯಾನಾ ಸರ್ಕಲ್ ಬಳಿ ಪಿಎಫ್ ಐ ಸಂಘಟನೆಗಳ ಕಚೇರಿ ಹಾಗೂ ಮನೆಗಳ ಮೇಲೆ ಎನ್ಐಎ ದಾಳಿಯನ್ನು ಖಂಡಿಸಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಅನುಮತಿ ಇಲ್ಲದೆ ರಸ್ತೆ ತಡೆದು ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡಿದ್ದು, ಸ್ಥಳಕ್ಕೆ ತೆರಳಿದ ಉಡುಪಿ ನಗರ ಠಾಣೆ ಪೊಲೀಸರು ಯಾವುದೇ ಪರವಾನಿಗೆ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ಸ್ಥಳದಿಂದ ಹೋಗಲು ಸೂಚನೆ ನೀಡಿದ್ದಾರೆ. ಆದರೆ, ಕಾರ್ಯಕರ್ತರು ಸ್ಥಳದಿಂದ ತೆರಳದಿದ್ದಾಗ 11 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಮುಂದಿನ ವಿಚಾರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು