1:41 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ: ಹಸೆಮಣೆ ಏರಲಿರುವ ಅನುಶ್ರೀ- ರೋಷನ್ ಜೋಡಿ

26/08/2025, 23:06

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಆ್ಯಂಕರ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಅನುಶ್ರೀ ಅವರು ಆ. 28ರಂದು ಹಸೆಮಣೆ ಏರಲಿದ್ದಾರೆ.
ಅವರು ಬೆಂಗಳೂರು ಹೊರ ವಲಯದಲ್ಲಿರುವ ಕಗ್ಗಲಿಪುರದ ಬೈ ಸ್ಪಾನ್​ಲೈನ್ಸ್ ಸ್ಟುಡಿಯೋಸ್​ನಲ್ಲಿ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದ ರೋಷನ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ.
ಇತ್ತೀಚಿಗೆ ಅನುಶ್ರೀ ಅವರ ಲಗ್ನ ಪತ್ರಿಕೆ ವೈರಲ್ ಆಗಿದ್ದು, ‘ನೀವೆಲ್ಲ ಕೇಳುತ್ತಿದ್ದ ಪ್ರಶ್ನೆಗೆ ಈಗ ಉತ್ತರ, ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ’ ಎಂದು ಲಗ್ನ ಪತ್ರಿಕೆಯಲ್ಲಿ ಅನುಶ್ರೀ ಛಾಪಿಸಿದ್ದಾರೆ.
ಅನುಶ್ರೀ ಹಾಗೂ ರೋಷನ್ ಅವರದ್ದು ಪ್ರೇಮ ವಿವಾಹ ಎಂದು ಹೇಳಲಾಗಿದೆ. ಈ ಜೋಡಿ ಮೊದಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮನೆಯಲ್ಲಿ ಭೇಟಿಯಾಗಿ ತದನಂತರ ಪರಿಚಯ ಬೆಳೆದು, ಪ್ರೇಮಾಂಕುರಗೊಂಡಿತ್ತು. ಈಗ ಪರಸ್ಪರ ಮನೆಯವರ ಒಪ್ಪಿಗೆಯೊಂದಿಗೆ ಬಾಳ ಸಂಗಾತಿಗಳಾಗುತ್ತಿದ್ದಾರೆ.
ಅನುಶ್ರೀ ಅವರ ಭಾವಿ ಪತಿ ರೋಷನ್ ಮೂಲತಃ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದವರು. ಈ ಹಿಂದೆ ಸುಂಟಿಕೊಪ್ಪದಲ್ಲಿ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ರಾಮಮೂರ್ತಿ ಮತ್ತು ಸಿಸಿಲಿಯ ದಂಪತಿಯ ಪುತ್ರ. ಇವರು ಜನಿಸಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಣ ಪಡೆದಿದ್ದು ಸುಂಟಿಕೊಪ್ಪದಲ್ಲಿ. ದಶಕದ ಹಿಂದೆ ಇವರ ತಂದೆ ತಾಯಿ ಸುಂಟಿಕೊಪ್ಪ ತೊರೆದು ಪ್ರಸ್ತುತ ಕುಶಾಲನಗರದಲ್ಲಿ ನೆಲೆಸಿದ್ದಾರೆ. ಉನ್ನತ ಶಿಕ್ಷಣ ಪಡೆದು ರೋಷನ್ ಬೆಂಗಳೂರಿನಲ್ಲಿ ತಮ್ಮದೇ ಆದ ಉದ್ಯಮವನ್ನು ಆರಂಭಿಸಿದ್ದರು.
ಆ. 28ರಂದು ಅನುಶ್ರೀ ಮತ್ತು ರೋಷನ್ ಜೋಡಿ ತಮ್ಮ ಆಪ್ತರು, ಕುಟುಂಬದವರು ಹಾಗೂ ಗೆಳೆಯರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು