11:12 PM Tuesday26 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ: ಹಸೆಮಣೆ ಏರಲಿರುವ ಅನುಶ್ರೀ- ರೋಷನ್ ಜೋಡಿ

26/08/2025, 23:06

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಆ್ಯಂಕರ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಅನುಶ್ರೀ ಅವರು ಆ. 28ರಂದು ಹಸೆಮಣೆ ಏರಲಿದ್ದಾರೆ.
ಅವರು ಬೆಂಗಳೂರು ಹೊರ ವಲಯದಲ್ಲಿರುವ ಕಗ್ಗಲಿಪುರದ ಬೈ ಸ್ಪಾನ್​ಲೈನ್ಸ್ ಸ್ಟುಡಿಯೋಸ್​ನಲ್ಲಿ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದ ರೋಷನ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ.
ಇತ್ತೀಚಿಗೆ ಅನುಶ್ರೀ ಅವರ ಲಗ್ನ ಪತ್ರಿಕೆ ವೈರಲ್ ಆಗಿದ್ದು, ‘ನೀವೆಲ್ಲ ಕೇಳುತ್ತಿದ್ದ ಪ್ರಶ್ನೆಗೆ ಈಗ ಉತ್ತರ, ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ’ ಎಂದು ಲಗ್ನ ಪತ್ರಿಕೆಯಲ್ಲಿ ಅನುಶ್ರೀ ಛಾಪಿಸಿದ್ದಾರೆ.
ಅನುಶ್ರೀ ಹಾಗೂ ರೋಷನ್ ಅವರದ್ದು ಪ್ರೇಮ ವಿವಾಹ ಎಂದು ಹೇಳಲಾಗಿದೆ. ಈ ಜೋಡಿ ಮೊದಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮನೆಯಲ್ಲಿ ಭೇಟಿಯಾಗಿ ತದನಂತರ ಪರಿಚಯ ಬೆಳೆದು, ಪ್ರೇಮಾಂಕುರಗೊಂಡಿತ್ತು. ಈಗ ಪರಸ್ಪರ ಮನೆಯವರ ಒಪ್ಪಿಗೆಯೊಂದಿಗೆ ಬಾಳ ಸಂಗಾತಿಗಳಾಗುತ್ತಿದ್ದಾರೆ.
ಅನುಶ್ರೀ ಅವರ ಭಾವಿ ಪತಿ ರೋಷನ್ ಮೂಲತಃ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದವರು. ಈ ಹಿಂದೆ ಸುಂಟಿಕೊಪ್ಪದಲ್ಲಿ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ರಾಮಮೂರ್ತಿ ಮತ್ತು ಸಿಸಿಲಿಯ ದಂಪತಿಯ ಪುತ್ರ. ಇವರು ಜನಿಸಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಣ ಪಡೆದಿದ್ದು ಸುಂಟಿಕೊಪ್ಪದಲ್ಲಿ. ದಶಕದ ಹಿಂದೆ ಇವರ ತಂದೆ ತಾಯಿ ಸುಂಟಿಕೊಪ್ಪ ತೊರೆದು ಪ್ರಸ್ತುತ ಕುಶಾಲನಗರದಲ್ಲಿ ನೆಲೆಸಿದ್ದಾರೆ. ಉನ್ನತ ಶಿಕ್ಷಣ ಪಡೆದು ರೋಷನ್ ಬೆಂಗಳೂರಿನಲ್ಲಿ ತಮ್ಮದೇ ಆದ ಉದ್ಯಮವನ್ನು ಆರಂಭಿಸಿದ್ದರು.
ಆ. 28ರಂದು ಅನುಶ್ರೀ ಮತ್ತು ರೋಷನ್ ಜೋಡಿ ತಮ್ಮ ಆಪ್ತರು, ಕುಟುಂಬದವರು ಹಾಗೂ ಗೆಳೆಯರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು