5:56 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ: ಹಸೆಮಣೆ ಏರಲಿರುವ ಅನುಶ್ರೀ- ರೋಷನ್ ಜೋಡಿ

26/08/2025, 23:06

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಆ್ಯಂಕರ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಅನುಶ್ರೀ ಅವರು ಆ. 28ರಂದು ಹಸೆಮಣೆ ಏರಲಿದ್ದಾರೆ.
ಅವರು ಬೆಂಗಳೂರು ಹೊರ ವಲಯದಲ್ಲಿರುವ ಕಗ್ಗಲಿಪುರದ ಬೈ ಸ್ಪಾನ್​ಲೈನ್ಸ್ ಸ್ಟುಡಿಯೋಸ್​ನಲ್ಲಿ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದ ರೋಷನ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ.
ಇತ್ತೀಚಿಗೆ ಅನುಶ್ರೀ ಅವರ ಲಗ್ನ ಪತ್ರಿಕೆ ವೈರಲ್ ಆಗಿದ್ದು, ‘ನೀವೆಲ್ಲ ಕೇಳುತ್ತಿದ್ದ ಪ್ರಶ್ನೆಗೆ ಈಗ ಉತ್ತರ, ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ’ ಎಂದು ಲಗ್ನ ಪತ್ರಿಕೆಯಲ್ಲಿ ಅನುಶ್ರೀ ಛಾಪಿಸಿದ್ದಾರೆ.
ಅನುಶ್ರೀ ಹಾಗೂ ರೋಷನ್ ಅವರದ್ದು ಪ್ರೇಮ ವಿವಾಹ ಎಂದು ಹೇಳಲಾಗಿದೆ. ಈ ಜೋಡಿ ಮೊದಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮನೆಯಲ್ಲಿ ಭೇಟಿಯಾಗಿ ತದನಂತರ ಪರಿಚಯ ಬೆಳೆದು, ಪ್ರೇಮಾಂಕುರಗೊಂಡಿತ್ತು. ಈಗ ಪರಸ್ಪರ ಮನೆಯವರ ಒಪ್ಪಿಗೆಯೊಂದಿಗೆ ಬಾಳ ಸಂಗಾತಿಗಳಾಗುತ್ತಿದ್ದಾರೆ.
ಅನುಶ್ರೀ ಅವರ ಭಾವಿ ಪತಿ ರೋಷನ್ ಮೂಲತಃ ಕೊಡಗು ಜಿಲ್ಲೆ ಸುಂಟಿಕೊಪ್ಪ ಮೂಲದವರು. ಈ ಹಿಂದೆ ಸುಂಟಿಕೊಪ್ಪದಲ್ಲಿ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ರಾಮಮೂರ್ತಿ ಮತ್ತು ಸಿಸಿಲಿಯ ದಂಪತಿಯ ಪುತ್ರ. ಇವರು ಜನಿಸಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಣ ಪಡೆದಿದ್ದು ಸುಂಟಿಕೊಪ್ಪದಲ್ಲಿ. ದಶಕದ ಹಿಂದೆ ಇವರ ತಂದೆ ತಾಯಿ ಸುಂಟಿಕೊಪ್ಪ ತೊರೆದು ಪ್ರಸ್ತುತ ಕುಶಾಲನಗರದಲ್ಲಿ ನೆಲೆಸಿದ್ದಾರೆ. ಉನ್ನತ ಶಿಕ್ಷಣ ಪಡೆದು ರೋಷನ್ ಬೆಂಗಳೂರಿನಲ್ಲಿ ತಮ್ಮದೇ ಆದ ಉದ್ಯಮವನ್ನು ಆರಂಭಿಸಿದ್ದರು.
ಆ. 28ರಂದು ಅನುಶ್ರೀ ಮತ್ತು ರೋಷನ್ ಜೋಡಿ ತಮ್ಮ ಆಪ್ತರು, ಕುಟುಂಬದವರು ಹಾಗೂ ಗೆಳೆಯರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು