8:43 AM Thursday24 - October 2024
ಬ್ರೇಕಿಂಗ್ ನ್ಯೂಸ್
ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್… ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಅಪಘಾತ ರಹಿತ ಚಾಲನೆ: ಧರ್ಮಸ್ಥಳ ಡಿಪೋದ ಕೆಎಸ್ಸಾರ್ಟಿಸಿ ಬಸ್ ಚಾಲಕ ಉಮೇಶ್ ಭಂಡಾರಿಗೆ ಚಿನ್ನದ ಪದಕ

28/01/2022, 17:52

ಮಂಗಳೂರು(reporterkarnataka.com): ಸತತ ಎರಡು ದಶಕಗಳ ಕಾಲ ಅಪಘಾತ ರಹಿತವಾಗಿ ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡಿದ ಸಾಧನೆಗಾಗಿ ಉಜಿರೆಯ ಎಸ್. ಉಮೇಶ್ ಭಂಡಾರಿ ಅವರಿಗೆ ಚಿನ್ನದ ಪದಕ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರವಿಸಿದೆ.

ಜನವರಿ 26 ರ ಬುಧವಾರ ಮಂಗಳೂರಿನ ನೆಹರೂ ಮೈದಾನದಲ್ಲಿ ಜರಗಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಈ ಪ್ರಶಸ್ತಿಯನ್ನು ವಿತರಿಸಿದರು.

ಉಮೇಶ್ ಭಂಡಾರಿ ಅವರಿಗೆ 1999ನೇ ಇಸವಿಯಲ್ಲಿ ಸತತ 5 ವರ್ಷ ಅಪಘಾತ ರಹಿತ ಚಾಲನೆಗೆ ಬೆಳ್ಳಿ ಪದಕ ಲಭಿಸಿತ್ತು .

ಇದೀಗ ಸತತ 15 ವರ್ಷಗಳ ಅಪಘಾತ ರಹಿತ ಚಾಲನೆಗೆ ಮತ್ತೊಮ್ಮೆ ಚಿನ್ನದ ಪದಕ ಮತ್ತು ಪ್ರಶಸ್ತಿ ಲಭಿಸಿರುವುದು ಕೆಲಸದಲ್ಲಿ ಅವರಿಗಿರುವ ಶ್ರದ್ಧೆ ,ನಿಷ್ಠೆಯನ್ನು ತಿಳಿಸುತ್ತದೆ .

ಈ ಪ್ರಶಸ್ತಿ ಲಭಿಸಿದ ಧರ್ಮಸ್ಥಳ ಡಿಪೋ ದ 4 ಚಾಲಕರಲ್ಲಿ ಹಾಗೂ ಪುತ್ತೂರು ಡಿವಿಷನ್ ನ 11 ಚಾಲಕರಲ್ಲಿ ಉಮೇಶ್ ಭಂಡಾರಿಯೂ ಒಬ್ಬರಾಗಿರುವುದು ವಿಶೇಷ .

ಕೊಪ್ಪದ ದಿವಂಗತ ಶೀನ ಭಂಡಾರಿ ಮತ್ತು ದಿವಂಗತ ರಮಣಿ ಭಂಡಾರಿ ಯವರ ಮೂರನೇ ಮಗನಾಗಿ ಜನಿಸಿದ ಉಮೇಶ್ ಭಂಡಾರಿ ಅವರನ್ನು 1987 ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕರಾಗಿ ನೇಮಿಸಿದೆ. ಉಮೇಶ್ ಭಂಡಾರಿಯವರು ಚಿಕ್ಕಮಗಳೂರು ಡಿಪೋ ದಲ್ಲಿ 2 ವರ್ಷ ಹಾಗೂ ಧರ್ಮಸ್ಥಳ ಡಿಪೋ ದಲ್ಲಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದಾರೆ.

ರಾತ್ರಿ ಹೊತ್ತಿನಲ್ಲಿ ತನ್ನ ಬಸ್ ನಲ್ಲಿ ಯಾರಾದರೂ ಅಶಕ್ತ , ಒಬ್ಬಂಟಿ ಮಹಿಳೆ, ಹೆಣ್ಣು ಮಕ್ಕಳಿದ್ದರೆ ಅವರ ಮನೆಯ ವರೆಗೆ ತಲುಪಿಸುವ ಜವಾಬ್ದಾರಿ ತೆಗೆದುಕೊಂಡು ಇಂತಹ ಹಲವಾರು ಉತ್ತಮ ಕೆಲಸಗಳನ್ನು ತಮ್ಮ ಸೇವಾವಧಿಯಲ್ಲಿ ಮಾಡಿಕೊಂಡು ಬಂದಿದ್ದಾರೆ.

ತನ್ನ ಕ್ಷೇತ್ರದಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ದುಡಿದಿಯುತ್ತಿದ್ದ ಉಮೇಶ್ ಭಂಡಾರಿ ಅವರ ಸೇವೆಯನ್ನು ಮನಗಂಡು ಕರ್ನಾಟಕ ಸರಕಾರ 1996 ರಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು