6:05 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಅಪಘಾತ ರಹಿತ ಚಾಲನೆ: ಧರ್ಮಸ್ಥಳ ಡಿಪೋದ ಕೆಎಸ್ಸಾರ್ಟಿಸಿ ಬಸ್ ಚಾಲಕ ಉಮೇಶ್ ಭಂಡಾರಿಗೆ ಚಿನ್ನದ ಪದಕ

28/01/2022, 17:52

ಮಂಗಳೂರು(reporterkarnataka.com): ಸತತ ಎರಡು ದಶಕಗಳ ಕಾಲ ಅಪಘಾತ ರಹಿತವಾಗಿ ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡಿದ ಸಾಧನೆಗಾಗಿ ಉಜಿರೆಯ ಎಸ್. ಉಮೇಶ್ ಭಂಡಾರಿ ಅವರಿಗೆ ಚಿನ್ನದ ಪದಕ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರವಿಸಿದೆ.

ಜನವರಿ 26 ರ ಬುಧವಾರ ಮಂಗಳೂರಿನ ನೆಹರೂ ಮೈದಾನದಲ್ಲಿ ಜರಗಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಈ ಪ್ರಶಸ್ತಿಯನ್ನು ವಿತರಿಸಿದರು.

ಉಮೇಶ್ ಭಂಡಾರಿ ಅವರಿಗೆ 1999ನೇ ಇಸವಿಯಲ್ಲಿ ಸತತ 5 ವರ್ಷ ಅಪಘಾತ ರಹಿತ ಚಾಲನೆಗೆ ಬೆಳ್ಳಿ ಪದಕ ಲಭಿಸಿತ್ತು .

ಇದೀಗ ಸತತ 15 ವರ್ಷಗಳ ಅಪಘಾತ ರಹಿತ ಚಾಲನೆಗೆ ಮತ್ತೊಮ್ಮೆ ಚಿನ್ನದ ಪದಕ ಮತ್ತು ಪ್ರಶಸ್ತಿ ಲಭಿಸಿರುವುದು ಕೆಲಸದಲ್ಲಿ ಅವರಿಗಿರುವ ಶ್ರದ್ಧೆ ,ನಿಷ್ಠೆಯನ್ನು ತಿಳಿಸುತ್ತದೆ .

ಈ ಪ್ರಶಸ್ತಿ ಲಭಿಸಿದ ಧರ್ಮಸ್ಥಳ ಡಿಪೋ ದ 4 ಚಾಲಕರಲ್ಲಿ ಹಾಗೂ ಪುತ್ತೂರು ಡಿವಿಷನ್ ನ 11 ಚಾಲಕರಲ್ಲಿ ಉಮೇಶ್ ಭಂಡಾರಿಯೂ ಒಬ್ಬರಾಗಿರುವುದು ವಿಶೇಷ .

ಕೊಪ್ಪದ ದಿವಂಗತ ಶೀನ ಭಂಡಾರಿ ಮತ್ತು ದಿವಂಗತ ರಮಣಿ ಭಂಡಾರಿ ಯವರ ಮೂರನೇ ಮಗನಾಗಿ ಜನಿಸಿದ ಉಮೇಶ್ ಭಂಡಾರಿ ಅವರನ್ನು 1987 ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕರಾಗಿ ನೇಮಿಸಿದೆ. ಉಮೇಶ್ ಭಂಡಾರಿಯವರು ಚಿಕ್ಕಮಗಳೂರು ಡಿಪೋ ದಲ್ಲಿ 2 ವರ್ಷ ಹಾಗೂ ಧರ್ಮಸ್ಥಳ ಡಿಪೋ ದಲ್ಲಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದಾರೆ.

ರಾತ್ರಿ ಹೊತ್ತಿನಲ್ಲಿ ತನ್ನ ಬಸ್ ನಲ್ಲಿ ಯಾರಾದರೂ ಅಶಕ್ತ , ಒಬ್ಬಂಟಿ ಮಹಿಳೆ, ಹೆಣ್ಣು ಮಕ್ಕಳಿದ್ದರೆ ಅವರ ಮನೆಯ ವರೆಗೆ ತಲುಪಿಸುವ ಜವಾಬ್ದಾರಿ ತೆಗೆದುಕೊಂಡು ಇಂತಹ ಹಲವಾರು ಉತ್ತಮ ಕೆಲಸಗಳನ್ನು ತಮ್ಮ ಸೇವಾವಧಿಯಲ್ಲಿ ಮಾಡಿಕೊಂಡು ಬಂದಿದ್ದಾರೆ.

ತನ್ನ ಕ್ಷೇತ್ರದಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ದುಡಿದಿಯುತ್ತಿದ್ದ ಉಮೇಶ್ ಭಂಡಾರಿ ಅವರ ಸೇವೆಯನ್ನು ಮನಗಂಡು ಕರ್ನಾಟಕ ಸರಕಾರ 1996 ರಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು