10:08 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಅಪಘಾತ ರಹಿತ ಚಾಲನೆ: ಧರ್ಮಸ್ಥಳ ಡಿಪೋದ ಕೆಎಸ್ಸಾರ್ಟಿಸಿ ಬಸ್ ಚಾಲಕ ಉಮೇಶ್ ಭಂಡಾರಿಗೆ ಚಿನ್ನದ ಪದಕ

28/01/2022, 17:52

ಮಂಗಳೂರು(reporterkarnataka.com): ಸತತ ಎರಡು ದಶಕಗಳ ಕಾಲ ಅಪಘಾತ ರಹಿತವಾಗಿ ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡಿದ ಸಾಧನೆಗಾಗಿ ಉಜಿರೆಯ ಎಸ್. ಉಮೇಶ್ ಭಂಡಾರಿ ಅವರಿಗೆ ಚಿನ್ನದ ಪದಕ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರವಿಸಿದೆ.

ಜನವರಿ 26 ರ ಬುಧವಾರ ಮಂಗಳೂರಿನ ನೆಹರೂ ಮೈದಾನದಲ್ಲಿ ಜರಗಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಈ ಪ್ರಶಸ್ತಿಯನ್ನು ವಿತರಿಸಿದರು.

ಉಮೇಶ್ ಭಂಡಾರಿ ಅವರಿಗೆ 1999ನೇ ಇಸವಿಯಲ್ಲಿ ಸತತ 5 ವರ್ಷ ಅಪಘಾತ ರಹಿತ ಚಾಲನೆಗೆ ಬೆಳ್ಳಿ ಪದಕ ಲಭಿಸಿತ್ತು .

ಇದೀಗ ಸತತ 15 ವರ್ಷಗಳ ಅಪಘಾತ ರಹಿತ ಚಾಲನೆಗೆ ಮತ್ತೊಮ್ಮೆ ಚಿನ್ನದ ಪದಕ ಮತ್ತು ಪ್ರಶಸ್ತಿ ಲಭಿಸಿರುವುದು ಕೆಲಸದಲ್ಲಿ ಅವರಿಗಿರುವ ಶ್ರದ್ಧೆ ,ನಿಷ್ಠೆಯನ್ನು ತಿಳಿಸುತ್ತದೆ .

ಈ ಪ್ರಶಸ್ತಿ ಲಭಿಸಿದ ಧರ್ಮಸ್ಥಳ ಡಿಪೋ ದ 4 ಚಾಲಕರಲ್ಲಿ ಹಾಗೂ ಪುತ್ತೂರು ಡಿವಿಷನ್ ನ 11 ಚಾಲಕರಲ್ಲಿ ಉಮೇಶ್ ಭಂಡಾರಿಯೂ ಒಬ್ಬರಾಗಿರುವುದು ವಿಶೇಷ .

ಕೊಪ್ಪದ ದಿವಂಗತ ಶೀನ ಭಂಡಾರಿ ಮತ್ತು ದಿವಂಗತ ರಮಣಿ ಭಂಡಾರಿ ಯವರ ಮೂರನೇ ಮಗನಾಗಿ ಜನಿಸಿದ ಉಮೇಶ್ ಭಂಡಾರಿ ಅವರನ್ನು 1987 ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕರಾಗಿ ನೇಮಿಸಿದೆ. ಉಮೇಶ್ ಭಂಡಾರಿಯವರು ಚಿಕ್ಕಮಗಳೂರು ಡಿಪೋ ದಲ್ಲಿ 2 ವರ್ಷ ಹಾಗೂ ಧರ್ಮಸ್ಥಳ ಡಿಪೋ ದಲ್ಲಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದಾರೆ.

ರಾತ್ರಿ ಹೊತ್ತಿನಲ್ಲಿ ತನ್ನ ಬಸ್ ನಲ್ಲಿ ಯಾರಾದರೂ ಅಶಕ್ತ , ಒಬ್ಬಂಟಿ ಮಹಿಳೆ, ಹೆಣ್ಣು ಮಕ್ಕಳಿದ್ದರೆ ಅವರ ಮನೆಯ ವರೆಗೆ ತಲುಪಿಸುವ ಜವಾಬ್ದಾರಿ ತೆಗೆದುಕೊಂಡು ಇಂತಹ ಹಲವಾರು ಉತ್ತಮ ಕೆಲಸಗಳನ್ನು ತಮ್ಮ ಸೇವಾವಧಿಯಲ್ಲಿ ಮಾಡಿಕೊಂಡು ಬಂದಿದ್ದಾರೆ.

ತನ್ನ ಕ್ಷೇತ್ರದಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ದುಡಿದಿಯುತ್ತಿದ್ದ ಉಮೇಶ್ ಭಂಡಾರಿ ಅವರ ಸೇವೆಯನ್ನು ಮನಗಂಡು ಕರ್ನಾಟಕ ಸರಕಾರ 1996 ರಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು