5:07 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಪಘಾತ ರಹಿತ ಚಾಲನೆ: ಧರ್ಮಸ್ಥಳ ಡಿಪೋದ ಕೆಎಸ್ಸಾರ್ಟಿಸಿ ಬಸ್ ಚಾಲಕ ಉಮೇಶ್ ಭಂಡಾರಿಗೆ ಚಿನ್ನದ ಪದಕ

28/01/2022, 17:52

ಮಂಗಳೂರು(reporterkarnataka.com): ಸತತ ಎರಡು ದಶಕಗಳ ಕಾಲ ಅಪಘಾತ ರಹಿತವಾಗಿ ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡಿದ ಸಾಧನೆಗಾಗಿ ಉಜಿರೆಯ ಎಸ್. ಉಮೇಶ್ ಭಂಡಾರಿ ಅವರಿಗೆ ಚಿನ್ನದ ಪದಕ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರವಿಸಿದೆ.

ಜನವರಿ 26 ರ ಬುಧವಾರ ಮಂಗಳೂರಿನ ನೆಹರೂ ಮೈದಾನದಲ್ಲಿ ಜರಗಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಈ ಪ್ರಶಸ್ತಿಯನ್ನು ವಿತರಿಸಿದರು.

ಉಮೇಶ್ ಭಂಡಾರಿ ಅವರಿಗೆ 1999ನೇ ಇಸವಿಯಲ್ಲಿ ಸತತ 5 ವರ್ಷ ಅಪಘಾತ ರಹಿತ ಚಾಲನೆಗೆ ಬೆಳ್ಳಿ ಪದಕ ಲಭಿಸಿತ್ತು .

ಇದೀಗ ಸತತ 15 ವರ್ಷಗಳ ಅಪಘಾತ ರಹಿತ ಚಾಲನೆಗೆ ಮತ್ತೊಮ್ಮೆ ಚಿನ್ನದ ಪದಕ ಮತ್ತು ಪ್ರಶಸ್ತಿ ಲಭಿಸಿರುವುದು ಕೆಲಸದಲ್ಲಿ ಅವರಿಗಿರುವ ಶ್ರದ್ಧೆ ,ನಿಷ್ಠೆಯನ್ನು ತಿಳಿಸುತ್ತದೆ .

ಈ ಪ್ರಶಸ್ತಿ ಲಭಿಸಿದ ಧರ್ಮಸ್ಥಳ ಡಿಪೋ ದ 4 ಚಾಲಕರಲ್ಲಿ ಹಾಗೂ ಪುತ್ತೂರು ಡಿವಿಷನ್ ನ 11 ಚಾಲಕರಲ್ಲಿ ಉಮೇಶ್ ಭಂಡಾರಿಯೂ ಒಬ್ಬರಾಗಿರುವುದು ವಿಶೇಷ .

ಕೊಪ್ಪದ ದಿವಂಗತ ಶೀನ ಭಂಡಾರಿ ಮತ್ತು ದಿವಂಗತ ರಮಣಿ ಭಂಡಾರಿ ಯವರ ಮೂರನೇ ಮಗನಾಗಿ ಜನಿಸಿದ ಉಮೇಶ್ ಭಂಡಾರಿ ಅವರನ್ನು 1987 ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕರಾಗಿ ನೇಮಿಸಿದೆ. ಉಮೇಶ್ ಭಂಡಾರಿಯವರು ಚಿಕ್ಕಮಗಳೂರು ಡಿಪೋ ದಲ್ಲಿ 2 ವರ್ಷ ಹಾಗೂ ಧರ್ಮಸ್ಥಳ ಡಿಪೋ ದಲ್ಲಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದಾರೆ.

ರಾತ್ರಿ ಹೊತ್ತಿನಲ್ಲಿ ತನ್ನ ಬಸ್ ನಲ್ಲಿ ಯಾರಾದರೂ ಅಶಕ್ತ , ಒಬ್ಬಂಟಿ ಮಹಿಳೆ, ಹೆಣ್ಣು ಮಕ್ಕಳಿದ್ದರೆ ಅವರ ಮನೆಯ ವರೆಗೆ ತಲುಪಿಸುವ ಜವಾಬ್ದಾರಿ ತೆಗೆದುಕೊಂಡು ಇಂತಹ ಹಲವಾರು ಉತ್ತಮ ಕೆಲಸಗಳನ್ನು ತಮ್ಮ ಸೇವಾವಧಿಯಲ್ಲಿ ಮಾಡಿಕೊಂಡು ಬಂದಿದ್ದಾರೆ.

ತನ್ನ ಕ್ಷೇತ್ರದಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ದುಡಿದಿಯುತ್ತಿದ್ದ ಉಮೇಶ್ ಭಂಡಾರಿ ಅವರ ಸೇವೆಯನ್ನು ಮನಗಂಡು ಕರ್ನಾಟಕ ಸರಕಾರ 1996 ರಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು