12:45 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಅಪಘಾತದಲ್ಲಿ ಕೈ ಕಳೆದುಕೊಂಡ ಬಾಳೆಪುಣಿ ಗ್ರಾಪಂ ಸದಸ್ಯೆಗೆ ಎಚ್ ಎಂಎಸ್ ನಿಂದ ಚಿಕಿತ್ಸೆಗೆ ನೆರವು

25/08/2022, 18:33

ಮಂಗಳೂರು(reporterkarnataka.com): ಇತ್ತೀಚೆಗೆ ವಾಹನಾಪಘಾತಕ್ಕೀಡಾಗಿ ತನ್ನ ಎಡ ಕೈಯನ್ನು ಕಳೆದುಕೊಂಡು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಳೆಪುಣಿ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ಗಣೇಶ್ ಬೀಡಿ ಕಾರ್ಮಿಕೆಯಾಗಿರುವ ಸೆಮೀಮ ಅವರಿಗೆ ಎಚ್.ಎಂ.ಎಸ್ ಯೂನಿಯನ್ ವತಿಯಿಂದ 30 ಸಾವಿರ ಆರ್ಥಿಕ ನೆರವು ನೀಡಲಾಯಿತು.

ಮಂಗಳೂರಿನ ಚಿತ್ತಾರ ಬಳಗದ ಮನವಿಗೆ ಸ್ಪಂದಿಸಿದ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಮತ್ತು  ಸೌತ್ ಕೆನರಾ ಮತ್ತು ಉಡುಪಿ ಬೀಡಿ ಕಂಟ್ರಾಕ್ಟರ್ಸ್ ಯೂನಿಯನ್ ಪದಾಧಿಕಾರಿಗಳು ಆಸ್ಪತ್ರೆಗೆ ಬಂದು ಸೆಮೀಮ ಅವರಿಗೆ ನೆರವಿನ ಮೊತ್ತದ ಚೆಕ್ ಹಸ್ತಾಂತರಿಸಿದರು. 

ಯೂನಿಯನ್ ರಾಜ್ಯ ಘಟಕದ ಅಧ್ಯಕ್ಷ ಎಂ.ಸುರೇಶ್ಚಂದ್ರ ಶೆಟ್ಟಿ, ಜಿಲ್ಲಾಧ್ಯಕ್ಷ ಮಹಮ್ಮದ್ ರಫಿ, ಕಂಟ್ರಾಕ್ಟರ್ಸ್ ಯೂನಿಯನ್ ಅಧ್ಯಕ್ಷ ಹರೀಶ್ ಕೆ.ಎಸ್. ಕೋಶಾಧಿಕಾರಿ ಇಸ್ಮಾಯಿಲ್ ಡಿ.ಎಸ್. , ಸದಸ್ಯ ಸಿದ್ದಿಕ್ ಅರ್ಕಾನ,  ಹಾಗೂ ಮುಡಿಪು ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕ್ರಷ್ಣಮೂಲ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು