11:18 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಪಘಾತ ಸಂಭವಿಸಿದ ಕಾರಿನಲ್ಲಿ ನಾನು ಇರಲಿಲ್ಲ: ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸ್ಪಷ್ಟನೆ

06/07/2021, 20:13

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರ ಕಾರು ಅಪಘಾತ ಸಂಭವಿಸಿದ್ದು, ತಾನು ಆ ಕಾರಿನಲ್ಲಿ ಇರಲಿಲ್ಲ ಎಂದು ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ.

ಅಥಣಿ ಪಟ್ಟಣದ  ಸ್ವಗೃಹದಲ್ಲಿ ರಿಪೋರ್ಟರ್ಸ್ ಕರ್ನಾಟಕ  ಜತೆ ಮಾತನಾಡಿದ ಅವರು, 

ನಾನು ಮತ್ತು ನಮ್ಮ ಸ್ನೇಹಿತರು ಅಂಜನಾದ್ರಿ ಬೆಟ್ಟದ ಹನುಮನ ದರ್ಶನಕ್ಕೆ ಹೋಗಿದ್ದೀವಿ. ಮರಳಿ ಊರಿಗೆ ಬರುವ ಸಂದರ್ಭದಲ್ಲಿ ಹುನಗುಂದ ಸಮೀಪದಲ್ಲಿ ಈ ಘಟನೆ ಸಂಭವಿಸಿದೆ. ನಾವು ಮತ್ತು ನಮ್ಮ ಸ್ನೇಹಿತರು ಎರಡು ಕಾರುಗಳಲ್ಲಿ ಹೋಗಿದ್ದು, ಹಿಂದಿನ ಕಾರಿನಿಂದ ನಮ್ಮ ಚಾಲಕ ಅಪಘಾತಕ್ಕೆ ಒಳಗಾಗಿ ನಮಗೆ ಕರೆ ಮಾಡಿದ ತಿಳಿಸಿದ. ನಾನು ತಕ್ಷಣವೇ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. 

ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಹೋರಡುತ್ತೇನೆ. ನಮ್ಮ ಕಡೆಯಿಂದ ಆದಷ್ಟು ಪರಿಹಾರ ನೀಡುತ್ತೇನೆ. ಯಾವುದೇ ರೀತಿಯ ತಮ್ಮ ತಂದೆಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ, ನಾನು ಯಾರ ಮುಂದೆಯೂ ಡಿಸಿಎಂ ಮಗನೆಂದು ಹೇಳಿಲ್ಲ ಎಂದು ಆರೋಪಕ್ಕೆ ತೆರೆ ಎಳೆದರು. 

ಸದ್ಯ ಈ ಪ್ರಕರಣ ಹುನಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ ಅವರು, ಈ ಪ್ರಕರಣದ ಬಗ್ಗೆ ನಮ್ಮ ತಂದೆಯವರಾದ ಲಕ್ಷಣ ಸವದಿ ಅವರಿಗೆ ಮಾಹಿತಿ ನೀಡಿದ್ದೆನೆ ಎಂದು ಚಿದಾನಂದ ಸವದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು