12:28 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಪಘಾತ ಸಂಭವಿಸಿದ ಕಾರಿನಲ್ಲಿ ನಾನು ಇರಲಿಲ್ಲ: ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸ್ಪಷ್ಟನೆ

06/07/2021, 20:13

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರ ಕಾರು ಅಪಘಾತ ಸಂಭವಿಸಿದ್ದು, ತಾನು ಆ ಕಾರಿನಲ್ಲಿ ಇರಲಿಲ್ಲ ಎಂದು ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ.

ಅಥಣಿ ಪಟ್ಟಣದ  ಸ್ವಗೃಹದಲ್ಲಿ ರಿಪೋರ್ಟರ್ಸ್ ಕರ್ನಾಟಕ  ಜತೆ ಮಾತನಾಡಿದ ಅವರು, 

ನಾನು ಮತ್ತು ನಮ್ಮ ಸ್ನೇಹಿತರು ಅಂಜನಾದ್ರಿ ಬೆಟ್ಟದ ಹನುಮನ ದರ್ಶನಕ್ಕೆ ಹೋಗಿದ್ದೀವಿ. ಮರಳಿ ಊರಿಗೆ ಬರುವ ಸಂದರ್ಭದಲ್ಲಿ ಹುನಗುಂದ ಸಮೀಪದಲ್ಲಿ ಈ ಘಟನೆ ಸಂಭವಿಸಿದೆ. ನಾವು ಮತ್ತು ನಮ್ಮ ಸ್ನೇಹಿತರು ಎರಡು ಕಾರುಗಳಲ್ಲಿ ಹೋಗಿದ್ದು, ಹಿಂದಿನ ಕಾರಿನಿಂದ ನಮ್ಮ ಚಾಲಕ ಅಪಘಾತಕ್ಕೆ ಒಳಗಾಗಿ ನಮಗೆ ಕರೆ ಮಾಡಿದ ತಿಳಿಸಿದ. ನಾನು ತಕ್ಷಣವೇ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. 

ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಹೋರಡುತ್ತೇನೆ. ನಮ್ಮ ಕಡೆಯಿಂದ ಆದಷ್ಟು ಪರಿಹಾರ ನೀಡುತ್ತೇನೆ. ಯಾವುದೇ ರೀತಿಯ ತಮ್ಮ ತಂದೆಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ, ನಾನು ಯಾರ ಮುಂದೆಯೂ ಡಿಸಿಎಂ ಮಗನೆಂದು ಹೇಳಿಲ್ಲ ಎಂದು ಆರೋಪಕ್ಕೆ ತೆರೆ ಎಳೆದರು. 

ಸದ್ಯ ಈ ಪ್ರಕರಣ ಹುನಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ ಅವರು, ಈ ಪ್ರಕರಣದ ಬಗ್ಗೆ ನಮ್ಮ ತಂದೆಯವರಾದ ಲಕ್ಷಣ ಸವದಿ ಅವರಿಗೆ ಮಾಹಿತಿ ನೀಡಿದ್ದೆನೆ ಎಂದು ಚಿದಾನಂದ ಸವದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು