2:15 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಅಪರಾಧ ತಡೆಗೆ ಪೊಲೀಸ್ ಇಲಾಖೆ ಜತೆ ಸಾರ್ವಜನಿಕರ ಸಹಕಾರ ಅಗತ್ಯ; ಪಿಎಸ್ ಐ

07/12/2021, 09:31

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com

ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಪಿಎಸ್‍ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಹೇಳಿದರು.

ತಾಲೂಕಿನ ನಾಯಕನ ಹಟ್ಟಿ ಪಟ್ಟಣದ ಆಟೋ ಮತ್ತು ಲಘು ಸರಕು ಸೇವೆ ವಾಹನಗಳ ನಿಲ್ದಾಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಟೋ ಚಾಲಕರು ಮತ್ತು ಸರಕು ಸೇವಾ ವಾಹನಗಳ ಚಾಲಕರು, ಲಘು ವಾಹನಗಳ ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಿಗೆ ಹೊಂದಿರಬೇಕು. ತಮ್ಮ ವಾಹನಗಳಿಗೆ ವಿಮೆಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಎಲ್ಲಿಯಾದರೂ ರಸ್ತೆ ಮಧ್ಯೆ ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ತಾವುಗಳು ಅಫಘಾತಕ್ಕೀಡದ ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ಮುಂದಾಗಬೇಕು. ಜೊತೆಗೆ ತಮ್ಮೆದುರಿಗೆ ಯಾವುದಾದರೂ ಅಪರಾಧಿ ಚಟುವಟಿಕೆಗಳು ನಡೆಯುತ್ತಿರುವುದು ಕಂಡು ಬಂದರೆ ತಕ್ಷಣವೇ ಪೊಲೀಸರ ಗಮನಕ್ಕೆ ತರಬೇಕು. ಹಾಗೂ ಯಾರಾದರೂ ಅಪರಾಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ, ಅಂಥವರ ಬಗ್ಗೆ ಸುಳಿವು ಕೊಡಬೇಕು. ತಮ್ಮ ವಾಹನಗಳನ್ನು ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಬಳಸಬಾರದು. ಚಾಲಕರು ವಾಹನವನ್ನು ಚಲಾಯಿಸುವಾಗ ಯಾವುದೇ ಕಾರಣಕ್ಕೂ ಮದ್ಯಪಾನ ಮಾಡಬಾರದು. ವಾಹನ ಚಾಲನೆಯಲ್ಲಿ ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಪೊಲೀಸರೊಂದಿಗೆ ಉತ್ತಮವಾದ ಬಾಂಧವ್ಯವನ್ನು ಹೊಂದಬೇಕು. ಇದರಿಂದ ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಕೃತ್ಯಗಳನ್ನು ತಡೆಯಲು ಸಹಕಾರಿಯಾಗುತ್ತದೆ ಎಂದು ವಾಹನ ಚಾಲಕರಿಗೆ ಕಿವಿಮಾತು ಹೇಳಿದರು.

ಇದೇವೇಳೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸರೊಂದಿಗೆ ಅಪರಾಧಿ ತಡೆ ಮಾಸಾಚರಣೆಯ ನಿಮಿತ್ತ ಜಾಗೃತಿ ಜಾಥಾವನ್ನು ನಡೆಸಲಾಯಿತು. ಸಿಬ್ಬಂದಿಗಳಾದ ಚನ್ನಕೇಶವ, ಜಗ ರೆಡ್ಡಿ, ಮಂಜುನಾಥ್, ಪ್ರದೀಪ್, ಕರಿಬಸಪ್ಪ, ಗ್ರಾಮಸ್ಥರಾದ ದಾದಪೀರ್, ಮುತ್ತಯ್ಯ, ಪ್ರಹ್ಲಾದ್ ಇದ್ದರು.

ಚಳ್ಳಕೆರೆ ತಾಲೂಕಿನ  ನಾಯಕನಹಟ್ಟಿ ಪಟ್ಟಣದಲ್ಲಿ ಆಟೋ ಮತ್ತು ಲಘು ಸರಕು ಸೇವಾ ವಾಹನಗಳ ನಿಲ್ದಾಣದಲ್ಲಿ ಭಾನುವಾರ ಪೊಲೀಸ್ ಇಲಾಖೆಯು ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು