11:11 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಅಪರೂಪದ ಗೊಂಬೆ ಪ್ರತಿಷ್ಠಾಪನೆ: ವಾಮಾಚಾರದ ಶಂಕೆ; ಕೌತುಕದ ಕಥೆ ಹಣೆಯುತ್ತಿರುವ ಗ್ರಾಮಸ್ಥರು

27/08/2021, 09:52

ವಿ.ಜಿ.ವೃಷಭೇಂದ್ರ  ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ತುಪ್ಪಕನಹಳ್ಳಿ ಗ್ರಾಮದ, ಹೊರವಲಯ ಅರಣ್ಯ ಪ್ರದೇಶದಲ್ಲಿ ಮಾಗಡಿಕಲ್ಲು ಕಟ್ಟೆ ಎಂಬಲ್ಲಿ ಅಪರೂಪದ ಗೊಂಬೆ ಕಂಡುಬಂದಿದ್ದು, ವಾಮಾಚಾರ ಪ್ರಯೋಗಕ್ಕಾಗಿ ಅದನ್ನು ವಿಧಿವತ್ತಾಗಿ ಪ್ರತಿಷ್ಠ‍ಾಪಿಸಲಾಗಿದೆ ಎಂದು ಗ್ರ‍ಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಕಾಲಕ್ಕೆ ಮಳೆ ಬಾರದಿದ್ದಾಗ ಅಥವಾ  ಗ್ರ‍ಾಮಕ್ಕೆ ಯಾವುದೋ ದುಷ್ಠ ಶಕ್ತಿಯ ಉಪಟಳ ಇದ್ದಾಗ, ಈ ರೀತಿಯಲ್ಲಿ  ವಾಮಾಚಾರ ಪ್ರಯೋಗದ ಮೂಲಕ ಗ್ರಾಮದಿಂದ ಹೊರಹಾಕಿ ದಿಗ್ಭಂದನ ಹಾಕಲಾಗುತ್ತದೆ ಎಂದು ಕೆಲ ಹಿರಿಯ ಗ್ರ‍ಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಈ ಗೊಂಬೆ ಪ್ರತಿಷ್ಠಾಪನೆಯನ್ನು ಯಾರು.!?ಯಾವ ಉದ್ದೇಶಕ್ಕಾಗಿ ಇಲ್ಲಿ ಪ್ರತಿಷ್ಠಾಪಿಸಿದ್ದಾರೆ..!?

ಎಂಬುದು ಇಡೀ ತುಪ್ಪಕ್ಕನಹಳ್ಳಿ ಗ್ರಾಮಸ್ಥರಲ್ಲಿ ಯಕ್ಷ ಪ್ರೆಶ್ನೆಯಾಗಿ ಮನೆ ಮಾಡಿದೆ. ಗೊಂಬೆ ಇರುವಲ್ಲಿಗೆ ತುಪ್ಪಕ್ಕನಹಳ್ಳಿ ಗ್ರಾಮಸ್ಥರು ತೀವ್ರ ಕುತೂಹಲ ಹಾಗೂ ದುಗುಡದೊಂದಿಗೆ, ಗುಂಪು ಗುಂಪಾಗಿ ದೌಡಾಯಿಸಿ ಗೊಂಬೆ ಯನ್ನು ಕಂಡು ಕೌತುಕ ಕಥೆಗಳನ್ನ ಎಣೆಯುತ್ತಿದ್ದಾರೆ. ಅಲ್ಲದೇ ಸುದ್ದಿ ತಿಳಿದ ನೆರೆ ಹೊರೆಯ ಗ್ರಾಮಸ್ಥರು ಗುಂಪು ಗುಂಪಾಗಿ, ಗೊಂಬೆ ಪ್ರತಿಷ್ಠಾಪಿಸಿರುವ ಸ್ಥಳಕ್ಕೆ ಮುತ್ತಿಗೆ ಹಾಕುತ್ತಿದ್ದಾರೆ. ಒಟ್ಟಾರೆಯಾಗಿ ಈ ಗೊಂಬೆ ನೋಡುಗರಲ್ಲಿ  ಕೌತುಕ ಹಾಗೂ ದುಗುಡ ಸೃಷ್ಟಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು