4:55 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಪರೂಪದ ಗೊಂಬೆ ಪ್ರತಿಷ್ಠಾಪನೆ: ವಾಮಾಚಾರದ ಶಂಕೆ; ಕೌತುಕದ ಕಥೆ ಹಣೆಯುತ್ತಿರುವ ಗ್ರಾಮಸ್ಥರು

27/08/2021, 09:52

ವಿ.ಜಿ.ವೃಷಭೇಂದ್ರ  ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ತುಪ್ಪಕನಹಳ್ಳಿ ಗ್ರಾಮದ, ಹೊರವಲಯ ಅರಣ್ಯ ಪ್ರದೇಶದಲ್ಲಿ ಮಾಗಡಿಕಲ್ಲು ಕಟ್ಟೆ ಎಂಬಲ್ಲಿ ಅಪರೂಪದ ಗೊಂಬೆ ಕಂಡುಬಂದಿದ್ದು, ವಾಮಾಚಾರ ಪ್ರಯೋಗಕ್ಕಾಗಿ ಅದನ್ನು ವಿಧಿವತ್ತಾಗಿ ಪ್ರತಿಷ್ಠ‍ಾಪಿಸಲಾಗಿದೆ ಎಂದು ಗ್ರ‍ಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಕಾಲಕ್ಕೆ ಮಳೆ ಬಾರದಿದ್ದಾಗ ಅಥವಾ  ಗ್ರ‍ಾಮಕ್ಕೆ ಯಾವುದೋ ದುಷ್ಠ ಶಕ್ತಿಯ ಉಪಟಳ ಇದ್ದಾಗ, ಈ ರೀತಿಯಲ್ಲಿ  ವಾಮಾಚಾರ ಪ್ರಯೋಗದ ಮೂಲಕ ಗ್ರಾಮದಿಂದ ಹೊರಹಾಕಿ ದಿಗ್ಭಂದನ ಹಾಕಲಾಗುತ್ತದೆ ಎಂದು ಕೆಲ ಹಿರಿಯ ಗ್ರ‍ಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಈ ಗೊಂಬೆ ಪ್ರತಿಷ್ಠಾಪನೆಯನ್ನು ಯಾರು.!?ಯಾವ ಉದ್ದೇಶಕ್ಕಾಗಿ ಇಲ್ಲಿ ಪ್ರತಿಷ್ಠಾಪಿಸಿದ್ದಾರೆ..!?

ಎಂಬುದು ಇಡೀ ತುಪ್ಪಕ್ಕನಹಳ್ಳಿ ಗ್ರಾಮಸ್ಥರಲ್ಲಿ ಯಕ್ಷ ಪ್ರೆಶ್ನೆಯಾಗಿ ಮನೆ ಮಾಡಿದೆ. ಗೊಂಬೆ ಇರುವಲ್ಲಿಗೆ ತುಪ್ಪಕ್ಕನಹಳ್ಳಿ ಗ್ರಾಮಸ್ಥರು ತೀವ್ರ ಕುತೂಹಲ ಹಾಗೂ ದುಗುಡದೊಂದಿಗೆ, ಗುಂಪು ಗುಂಪಾಗಿ ದೌಡಾಯಿಸಿ ಗೊಂಬೆ ಯನ್ನು ಕಂಡು ಕೌತುಕ ಕಥೆಗಳನ್ನ ಎಣೆಯುತ್ತಿದ್ದಾರೆ. ಅಲ್ಲದೇ ಸುದ್ದಿ ತಿಳಿದ ನೆರೆ ಹೊರೆಯ ಗ್ರಾಮಸ್ಥರು ಗುಂಪು ಗುಂಪಾಗಿ, ಗೊಂಬೆ ಪ್ರತಿಷ್ಠಾಪಿಸಿರುವ ಸ್ಥಳಕ್ಕೆ ಮುತ್ತಿಗೆ ಹಾಕುತ್ತಿದ್ದಾರೆ. ಒಟ್ಟಾರೆಯಾಗಿ ಈ ಗೊಂಬೆ ನೋಡುಗರಲ್ಲಿ  ಕೌತುಕ ಹಾಗೂ ದುಗುಡ ಸೃಷ್ಟಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು