2:35 PM Wednesday18 - June 2025
ಬ್ರೇಕಿಂಗ್ ನ್ಯೂಸ್
ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ

10/03/2025, 22:35

ಬೆಂಗಳೂರು(reporterkarnataka.com): ಅಮೆಜಾನ್, ಬಿಗ್ಬ್ಯಾಸ್ಕೆಟ್, ಡಿ. ಮಾರ್ಟ್ ಸೇರಿದಂತೆ ಎಲ್ಲ ಇ–ಫ್ಲಾಟ್ಫಾರಂ ವೇದಿಕೆಗಳು ಇನ್ನು ಮುಂದೆ ಎಪಿಎಂಸಿ ನಿಯಂತ್ರಣಕ್ಕೆ ಬರಲಿವೆ. ಸೆಸ್ ವಂಚನೆ ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕಕ್ಕೆ ಸೋಮವಾರ ಅನುಮೋದನೆ ದೊರೆತಿದೆ.
ಯಾವುದೇ ಇ-ಫ್ಲಾಟ್ಫಾರಂಗಳು ಇನ್ನು ಮುಂದೆ ಎಪಿಎಂಸಿಗಳಿಗೆ ಸೆಸ್ ಸಂದಾಯ ಮಾಡುವುದು ಕಡ್ಡಾಯ. ಸೆಸ್ ವಂಚನೆ ಮಾಡಿದರೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಕೃಷಿ ಮಾರುಕಟ್ಟೆ ನಿರ್ದೇಶಕರಿಗೆ ನೀಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲಗ ತಿಳಿಸಿದರು.


ಕೃಷಿ ಮಾರುಕಟ್ಟೆ ನಿರ್ದೇಶಕರು ನೀಡುವ ಯಾವುದೇ ತೀರ್ಪಿನ ಬಗ್ಗೆ ಅಸಮಧಾನ ಇದ್ದರೆ ನಿರ್ದೇಶಕರ ಆದೇಶ ಸ್ವೀಕರಿಸಿದ 30 ದಿನಗಳೊಳಗೆ ಕರ್ನಾಟಕ ಅಫೀಲು ನ್ಯಾಯಾಧೀಕರಣಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸೋಮವಾರ ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರಕ್ಕೆ ಮನವಿ ಮಾಡಿದ ಸಚಿವರು, ಈ ತಿದ್ದುಪಡಿಯಿಂದ ಎಪಿಎಂಸಿ ಅಥವಾ ರೈತರನ್ನು ವಂಚನೆ ಮಾಡಲು ಸಾಧ್ಯವಿಲ್ಲ. ಕಂಪನಿಯೊಂದು ಸೆಸ್ ವಂಚನೆ ಮಾಡಿದ್ದರಿಂದ ದೊಡ್ಡ ಮೊತ್ತದ ದಂಡ ವಸೂಲು ಮಾಡಲಾಗಿದೆ ಎಂದು ವಿವರಿಸಿದರು.
ಯಾವುದೇ ವ್ಯಕ್ತಿ ಈ ಪ್ರಕರಣದ ಅಡಿಯಲ್ಲಿ ಲೈಸೆನ್ಸ್ ಪಡೆಯದ ಹೊರತು ಅಧಿಸೂಚಿತ ಕೃಷಿ ಉತ್ಪನ್ನದ ವ್ಯಾಪಾರಕ್ಕಾಗಿ ಇ – ವಾಣಿಜ್ಯ ವೇದಿಕೆ ಸ್ಥಾಪನೆ ಮಾಡುವಂತಿಲ್ಲ.
ಉದ್ದೇಶಪೂರ್ವಕ ತಪ್ಪು ಮಾಹಿತಿ ಅಥವಾ ವಂಚನೆ ಮೂಲಕ ಲೈಸೆನ್ಸ್ ಪಡೆದಿದ್ದರೆ, ಲೈಸೆನ್ಸ್ದಾರರು ಯಾವುದೇ ನಿಬಂಧನೆ ಅಥವಾ ಷರತ್ತು ಉಲ್ಲಂಘನೆ ಮಾಡಿದರೆ ಮಾರುಕಟ್ಟೆ ನಿರ್ದೇಶಕರು ಲೈಸೆನ್ಸ್ ಅಮಾನತುಪಡಿಸುವ ಅಧಿಕಾರ ಹೊಂದಿರುತ್ತಾರೆ.
ಕೃಷಿ ಮಾರುಕಟ್ಟೆ ನಿರ್ದೇಶಕರು ನೇಮಕ ಮಾಡಬಹುದಾದ ಷರತ್ತುಗಳು ಮತ್ತು ಅಂಥ ಶುಲ್ಕಗಳು ಮತ್ತು ಭದ್ರತಾ ಠೇವಣಿಗೊಳಪಟ್ಟು ಅಧಿಸೂಚಿತ ಕೃಷಿ ಉತ್ಪನ್ನದ ವ್ಯಾಪಾರ ಸುಗಮಗೊಳಿಸಲು ಇ-ವಾಣಿಜ್ಯ ವೇದಿಕೆ ರಚಿಸಲು ಲೈಸೆನ್ಸ್ ಮಂಜೂರು ಮಾಡಬಹುದು.
ಇ-ವಾಣಿಜ್ಯ ವೇದಿಕೆ ಸ್ಥಾಪಿಸಲು ಮತ್ತು ನಡೆಸಲು ಬಯಸುವ ಯಾವುದೇ ವ್ಯಕ್ತಿ ಕೃಷಿ ಮಾರುಕಟ್ಟೆ ನಿರ್ದೇಶಕರು ನೇಮಕ ಮಾಡಬಹುದಾದ ವಿಧಾನದಲ್ಲಿ ಶುಲ್ಕ ಮತ್ತು ಠೇವಣಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಇ-ಫ್ಲಾಟ್ಪಾರಂನಲ್ಲಿ ನೋಂದಾಯಿಸಲು ಈ ಅಧಿನಿಯಮದಡಿ ಯುಕ್ತ ಪ್ರಾಧಿಕಾರವು ಲೈಸೆನ್ಸ್ ನೀಡಿದ ಲೈಸೆನ್ಸ್ ಯುಕ್ತ ವ್ಯಾಪಾರಿಗಳನ್ನು ಮಾತ್ರ ಅನುಮತಿಸತಕ್ಕದ್ದು. ವೇದಿಕೆಯಲ್ಲಿ ನಡೆಯುವ ಸಂಪೂರ್ಣ ವ್ಯಾಪಾರ ಕಾರ್ಯಾಚರಣೆ, ಸಂಬಂಧಿಸಿದ ಕಾರ್ಯಚಟುವಟಿಕೆ, ತೀರ್ಮಾನಗಳಲ್ಲಿ ಪಾರದರ್ಶಕ ಕಡ್ಡಾಯಗೊಳಿಸಲಾಗಿದೆ. ಹಾಗೂ ಎಲ್ಲ ವಹಿವಾಟು ದಾಖಲೆಗಳನ್ನು ವಿದ್ಯುನ್ಮಾನ ನಮೂನೆಯಲ್ಲಿ ನಿರ್ವಹಿಸಬೇಕು.
ಲೈಸೆನ್ಸ್ದಾರರು ಮಾಡಬೇಕಾದ ಪಾವತಿ, ಕೃಷಿ ಉತ್ಪನ್ನಗಳ ತೂಕ, ಗುಣಮಟ್ಟ, ಬೆಲೆ, ದರಗಳು, ಶುಲ್ಕಗಳು, ಮತ್ತಿತರ ವಿಚಾರ ಕುರಿತು ಇ–ವಾಣಿಜ್ಯ ವೇದಿಕೆ ಲೈಸೆನ್ಸುದಾರ ವೇದಿಕೆಯಲ್ಲಿ ಉತ್ಪನ್ನಕೊಡು-ಕೊಳ್ಳುವ ಯಾವುದೇ ವಿವಾದ ಇತ್ಯರ್ಥಕ್ಕೆ ಮೂವತ್ತು ದಿನಗಳೊಳಗೆ ಅಗತ್ಯ ದಾಖಲೆಗಳೊಂದಿಗೆ ಕೃಷಿ ಮಾರುಕಟ್ಟೆ ನಿರ್ದೇಶಕರಿಗೆ ಸಲ್ಲಿಸಬೇಕು.
ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ದೇಶಕರು ದೂರು ಸ್ವೀಕರಿಸಿದ ಮೇಲೆ ಅಹವಾಲು ಹೇಳಿಕೊಳ್ಳಲು ಅವಕಾಶ ನೀಡಿದ ನಂತರ 60 ದಿನಗಳೊಳಗೆ ವಿವಾದ ಇತ್ಯರ್ಥಪಡಿಸಬೇಕಾಗುತ್ತದೆ.
ಹಣ್ಣು, ತರಕಾರಿ, ಹೂವುಗಳ ವಿಚಾರದಲ್ಲಿ ಮಾರಾಟವಾದ ಅಧಿಸೂಚಿತ ಕೃಷಿ ಉತ್ಪನ್ನಗಳಿಗಾಗಿ ಬೆಲೆಯ ಶೇಕಡಾ ಐದಕ್ಕೆ ಮೀರದಂತೆ ಮತ್ತು ಇತರ ಎಲ್ಲ ಅಧಿಸೂಚಿತ ಉತ್ಪನ್ನಕ್ಕೆ ಶೇಕಡಾ ಎರಡರಷ್ಟು ಮಾತ್ರ ಉಗ್ರಾಣಸೇವಾದಾತರು ಸೇವಾ ಶುಲ್ಕ ಪಡೆಯಬಹುದು. ಅಗ್ನಿ ದುರಂತ, ಕಳವು, ಮಳೆ ಅಥವಾ ಯಾವುದೇ ನೈಸರ್ಗಿಕ ವಿಪತ್ತುಗಳೀಗೆ ಉಗ್ರಾಣದ ಮಾಲೀಖರು ವಿಮೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು