10:28 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಆಪೊಸ್ತಲಿಕ್ ಕಾರ್ಮೆಲ್ ಸಭೆಯ 10 ಸಹೋದರಿಯರ ಶಾಶ್ವತ ಪ್ರತಿಜ್ಞೆಯ ಧಾರ್ಮಿಕ ವಿಧಿ ಸಂಭ್ರಮ

08/12/2024, 23:48

ಮಂಗಳೂರು(reporterkarnataka.com):ಆಪೊಸ್ತಲಿಕ್ ಕಾರ್ಮೆಲ್ ಸಭೆಯ ಹತ್ತು ಕನ್ಯಾ ಸ್ತ್ರೀಯರ ಶಾಶ್ವತ ಪ್ರತಿಜ್ಞೆಯ ಧಾರ್ಮಿಕ ವಿಧಿಯು ಡಿಸೆಂಬರ್ 7 ರಂದು ನಗರದ ಮೇರಿಹಿಲ್ ಕಾನ್ವೆಂಟ್ ನಲ್ಲಿ ನೆರವೇರಿತು.
ಮಂಗಳೂರಿನ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇತರ ಸಹ ಧರ್ಮ ಗುರುಗಳ ಜೊತೆಗೂಡಿ ದಿವ್ಯ ಬಲಿ ಪೂಜೆಯನ್ನು ಅರ್ಪಿಸಿದರು. ಹತ್ತು ಯುವ ಕನ್ಯಾ ಸ್ತ್ರೀಯರು ಆಪೊಸ್ತಲಿಕ್ ಕಾರ್ಮೆಲ್ ನ ಸುಪೀರಿಯರ್ ಜನರಲ್ ಭಗಿನಿ ನಿರ್ಮಲಿನಿ ಎ.ಸಿ. ಮತ್ತು ಇತರ ಧರ್ಮ ಭಗಿನಿಯರ ಸಮ್ಮುಖದಲ್ಲಿ, ಪರಿಶುದ್ಧತೆ, ಬಡತನ ಮತ್ತು ವಿಧೇಯತೆಯ ಪ್ರತಿಜ್ನೆಯ ಮೂಲಕ ತಮ್ಮನ್ನು ಸಂಪೂರ್ಣವಾಗಿ ಮತ್ತು ಶಾಶ್ವತವಾಗಿ ಯೇಸು ಸ್ವಾಮಿಗೆ ಸಮರ್ಪಿಸಿದರು.


ತದ ನಂತರ ಮೌಂಟ್ ಕಾರ್ಮೆಲ್ ಶಾಲಾ ಸಭಾಂಗಣದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮವು ಶಾಲೆಯ ವಿದ್ಯಾರ್ಥಿಗಳ ಸ್ವಾಗತ ನ್ರತ್ಯದೊಂದಿಗೆ ಪ್ರಾರಂಭವಾಯಿತು. ನವಶಿಷ್ಯರ ಶುಭಾಶಯ ಗೀತೆ ಎಲ್ಲರನ್ನು ಹರ್ಷಗೊಳಿಸಿತು. ಸುಪೀರಿಯರ್ ಜನರಲ್ ಭಗಿನಿ ನಿರ್ಮಲಿನಿಯವರು ಯುವ ಕನ್ಯಾ ಸ್ತ್ರೀಯರಿಗೆ ಹಾರ ಹಾಕಿ ಅಭಿನಂದಿಸಿದರು. ಅವರು ತಮ್ಮ ಭಾಷಣದಲ್ಲಿ, ದೇವರ ಬೇಷರತ್ತಾದ ಪ್ರೀತಿಗೆ ಸಮರ್ಪಿಸಿದ ಸಹೋದರಿಯರನ್ನು ಉದ್ದೇಶಿಸಿ ದೇವರ ಪ್ರೀತಿಯಲ್ಲಿ ಸದಾ ಬದ್ದರಾಗಿರಲು ಸಲಹೆ ನೀಡಿದರು ಮತ್ತು ಈ ಸಹೋದರಿಯರ ಪೋಷಕರು ಮತ್ತು ಕುಟುಂಬದ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಈ ಸಂಭ್ರಮಾಚರಣೆಯಲ್ಲಿ ಆಪೊಸ್ತಲಿಕ್ ಕಾರ್ಮೆಲ್ ಸುಪೀರಿಯರ್ ಜನರಲ್ ಭಗಿನಿ ನಿರ್ಮಲಿನಿ ಎ.ಸಿ., ಇವರೊಂದಿಗೆ ಪ್ರಾಂತೀಯ ಪದಾಧಿಕಾರಿಗಳು,, ಭಾರತ ಮತ್ತು ಶ್ರೀಲಂಕಾದಿಂದ ಆಗಮಿಸಿದ ಕುಟುಂಬದ ಸದಸ್ಯರು, ಹಿತೈಷಿಗಳು, ಧರ್ಮ ಗುರುಗಳು, ಹಲವಾರು ಧರ್ಮ ಭಗಿನಿಯರು ಉತ್ಸಾಹದಿಂದ ಭಾಗವಹಿಸಿದರು ಮತ್ತು ಶಾಶ್ವತ ಪ್ರತಿಜ್ನೆ ಮಾಡಿದ ಭಗಿನಿಯರನ್ನು ಅಭಿನಂದಿಸಿದರು. ಕೊನೆಯಲ್ಲಿ ಸಹಭಾಗಿತ್ವದ ಭೋಜನವು ಎಲ್ಲರನ್ನು ಒಂದುಗೂಡಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು