9:56 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಅಪ್ಪಟ ಕನ್ನಡತಿ, ಗೌರಿಬಿದನೂರಿನ ಶಿಲ್ಪಾ ಪ್ರಭಾಕರ್  ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಅಧಿಕಾರಿ

29/05/2021, 07:39

ಚಿಕ್ಕಬಳ್ಳಾಪುರ(reporterkarnataka news): ಕಾವೇರಿ ವಿಷಯದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೆ ಯಾವಾಗಲೂ ಮನಸ್ತಾಪ ಇದ್ದದ್ದೇ. ಈ ವಿಷಯ ಬಿಟ್ಟರೆ ಕನ್ನಡಿಗರು ಮತ್ತು ತಮಿಳರು ಅನ್ಯೋನ್ಯವಾಗಿಯೇ ಬದುಕು ಸಾಗಿಸುತ್ತಿದ್ದಾರೆ. ಇದೀಗ ಅಚ್ಚರಿಯ ವಿಷಯವೆಂದರೆ ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ ನಮ್ಮ ಅಪ್ಪಟ ಕನ್ನಡತಿ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯ ಶಿಲ್ಪಾ ಪ್ರಭಾಕರ್ ಅವರೇ ವಿಶೇಷ ಅಧಿಕಾರಿ. ಇವರು ನಿವೃತ್ತ ಪೊಲೀಸ್ ಅಧಿಕಾರಿ ಪ್ರಭಾಕರ್​ ಅವರ ಪುತ್ರಿ.

1981 ಆಗಸ್ಟ್ 31 ಗೌರಿಬಿದನೂರು ನಗರದಲ್ಲಿ ಜನಿಸಿದ ಶಿಲ್ಪಾ, ಪ್ರಾಥಮಿಕ ಹಾಗೂ ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ನ್ಯಾಷನಲ್ ಕಾಲೇಜ್​ನಲ್ಲಿ ಪೂರೈಸಿದರು. ಬೆಂಗಳೂರಿನಲ್ಲಿ ಎಲ್ ಎಲ್ ಬಿ ಪದವಿ ಪಡೆದರು.  ನಂತರ ಯುಪಿಎಸ್ ಸಿ ಪರೀಕ್ಷೆಗೆ ಕುಳಿತರು. ಅಲ್ಲಿ 46ನೇ ಸ್ಥಾನದೊಂದಿಗೆ ಉತ್ತೀರ್ಣರಾಗಿದ್ದರು. 2018ರಲ್ಲಿ ತಮಿಳುನಾಡಿನ ತಿರುವನ್ವೇಲಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ನೇಮಕಗೊಂಡರು. ಅಂಗನವಾಡಿ ಕೇಂದ್ರಗಳನ್ನು ದೇಶದಲ್ಲಿಯೇ ಮಾದರಿ ಅಂಗನವಾಡಿ ಮಾಡಲು ನಿರ್ಧರಿಸಿ ತಮ್ಮ ಮೂರು ವರ್ಷದ ಹೆಣ್ಣುಮಗುವನ್ನು ಅಂಗನವಾಡಿಗೆ ಸೇರಿಸುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದರು. ಶಿಲ್ಪಾ ಅವರು ಮುಂದೆ ಎಂದೂ ತನ್ನ ವೃತ್ತಿ ಜೀವನದಲ್ಲಿ ಹಿಂತಿರುಗಿ ನೋಡಿಲ್ಲ. ಇದೀಗ ತಮಿಳುನಾಡು ಸಿಎಂ ನ ವಿಶೇಷ ಅಧಿಕಾರಿ.

ಇತ್ತೀಚಿನ ಸುದ್ದಿ

ಜಾಹೀರಾತು