11:46 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಅಪ್ಪಟ ಕನ್ನಡತಿ, ಗೌರಿಬಿದನೂರಿನ ಶಿಲ್ಪಾ ಪ್ರಭಾಕರ್  ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಅಧಿಕಾರಿ

29/05/2021, 07:39

ಚಿಕ್ಕಬಳ್ಳಾಪುರ(reporterkarnataka news): ಕಾವೇರಿ ವಿಷಯದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೆ ಯಾವಾಗಲೂ ಮನಸ್ತಾಪ ಇದ್ದದ್ದೇ. ಈ ವಿಷಯ ಬಿಟ್ಟರೆ ಕನ್ನಡಿಗರು ಮತ್ತು ತಮಿಳರು ಅನ್ಯೋನ್ಯವಾಗಿಯೇ ಬದುಕು ಸಾಗಿಸುತ್ತಿದ್ದಾರೆ. ಇದೀಗ ಅಚ್ಚರಿಯ ವಿಷಯವೆಂದರೆ ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ ನಮ್ಮ ಅಪ್ಪಟ ಕನ್ನಡತಿ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯ ಶಿಲ್ಪಾ ಪ್ರಭಾಕರ್ ಅವರೇ ವಿಶೇಷ ಅಧಿಕಾರಿ. ಇವರು ನಿವೃತ್ತ ಪೊಲೀಸ್ ಅಧಿಕಾರಿ ಪ್ರಭಾಕರ್​ ಅವರ ಪುತ್ರಿ.

1981 ಆಗಸ್ಟ್ 31 ಗೌರಿಬಿದನೂರು ನಗರದಲ್ಲಿ ಜನಿಸಿದ ಶಿಲ್ಪಾ, ಪ್ರಾಥಮಿಕ ಹಾಗೂ ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ನ್ಯಾಷನಲ್ ಕಾಲೇಜ್​ನಲ್ಲಿ ಪೂರೈಸಿದರು. ಬೆಂಗಳೂರಿನಲ್ಲಿ ಎಲ್ ಎಲ್ ಬಿ ಪದವಿ ಪಡೆದರು.  ನಂತರ ಯುಪಿಎಸ್ ಸಿ ಪರೀಕ್ಷೆಗೆ ಕುಳಿತರು. ಅಲ್ಲಿ 46ನೇ ಸ್ಥಾನದೊಂದಿಗೆ ಉತ್ತೀರ್ಣರಾಗಿದ್ದರು. 2018ರಲ್ಲಿ ತಮಿಳುನಾಡಿನ ತಿರುವನ್ವೇಲಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ನೇಮಕಗೊಂಡರು. ಅಂಗನವಾಡಿ ಕೇಂದ್ರಗಳನ್ನು ದೇಶದಲ್ಲಿಯೇ ಮಾದರಿ ಅಂಗನವಾಡಿ ಮಾಡಲು ನಿರ್ಧರಿಸಿ ತಮ್ಮ ಮೂರು ವರ್ಷದ ಹೆಣ್ಣುಮಗುವನ್ನು ಅಂಗನವಾಡಿಗೆ ಸೇರಿಸುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದರು. ಶಿಲ್ಪಾ ಅವರು ಮುಂದೆ ಎಂದೂ ತನ್ನ ವೃತ್ತಿ ಜೀವನದಲ್ಲಿ ಹಿಂತಿರುಗಿ ನೋಡಿಲ್ಲ. ಇದೀಗ ತಮಿಳುನಾಡು ಸಿಎಂ ನ ವಿಶೇಷ ಅಧಿಕಾರಿ.

ಇತ್ತೀಚಿನ ಸುದ್ದಿ

ಜಾಹೀರಾತು