2:12 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಪ್ಪಟ ಕನ್ನಡತಿ, ಗೌರಿಬಿದನೂರಿನ ಶಿಲ್ಪಾ ಪ್ರಭಾಕರ್  ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಅಧಿಕಾರಿ

29/05/2021, 07:39

ಚಿಕ್ಕಬಳ್ಳಾಪುರ(reporterkarnataka news): ಕಾವೇರಿ ವಿಷಯದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೆ ಯಾವಾಗಲೂ ಮನಸ್ತಾಪ ಇದ್ದದ್ದೇ. ಈ ವಿಷಯ ಬಿಟ್ಟರೆ ಕನ್ನಡಿಗರು ಮತ್ತು ತಮಿಳರು ಅನ್ಯೋನ್ಯವಾಗಿಯೇ ಬದುಕು ಸಾಗಿಸುತ್ತಿದ್ದಾರೆ. ಇದೀಗ ಅಚ್ಚರಿಯ ವಿಷಯವೆಂದರೆ ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ ನಮ್ಮ ಅಪ್ಪಟ ಕನ್ನಡತಿ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯ ಶಿಲ್ಪಾ ಪ್ರಭಾಕರ್ ಅವರೇ ವಿಶೇಷ ಅಧಿಕಾರಿ. ಇವರು ನಿವೃತ್ತ ಪೊಲೀಸ್ ಅಧಿಕಾರಿ ಪ್ರಭಾಕರ್​ ಅವರ ಪುತ್ರಿ.

1981 ಆಗಸ್ಟ್ 31 ಗೌರಿಬಿದನೂರು ನಗರದಲ್ಲಿ ಜನಿಸಿದ ಶಿಲ್ಪಾ, ಪ್ರಾಥಮಿಕ ಹಾಗೂ ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ನ್ಯಾಷನಲ್ ಕಾಲೇಜ್​ನಲ್ಲಿ ಪೂರೈಸಿದರು. ಬೆಂಗಳೂರಿನಲ್ಲಿ ಎಲ್ ಎಲ್ ಬಿ ಪದವಿ ಪಡೆದರು.  ನಂತರ ಯುಪಿಎಸ್ ಸಿ ಪರೀಕ್ಷೆಗೆ ಕುಳಿತರು. ಅಲ್ಲಿ 46ನೇ ಸ್ಥಾನದೊಂದಿಗೆ ಉತ್ತೀರ್ಣರಾಗಿದ್ದರು. 2018ರಲ್ಲಿ ತಮಿಳುನಾಡಿನ ತಿರುವನ್ವೇಲಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ನೇಮಕಗೊಂಡರು. ಅಂಗನವಾಡಿ ಕೇಂದ್ರಗಳನ್ನು ದೇಶದಲ್ಲಿಯೇ ಮಾದರಿ ಅಂಗನವಾಡಿ ಮಾಡಲು ನಿರ್ಧರಿಸಿ ತಮ್ಮ ಮೂರು ವರ್ಷದ ಹೆಣ್ಣುಮಗುವನ್ನು ಅಂಗನವಾಡಿಗೆ ಸೇರಿಸುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದರು. ಶಿಲ್ಪಾ ಅವರು ಮುಂದೆ ಎಂದೂ ತನ್ನ ವೃತ್ತಿ ಜೀವನದಲ್ಲಿ ಹಿಂತಿರುಗಿ ನೋಡಿಲ್ಲ. ಇದೀಗ ತಮಿಳುನಾಡು ಸಿಎಂ ನ ವಿಶೇಷ ಅಧಿಕಾರಿ.

ಇತ್ತೀಚಿನ ಸುದ್ದಿ

ಜಾಹೀರಾತು