1:49 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅಪ್ಪಟ ಕನ್ನಡತಿ, ಗೌರಿಬಿದನೂರಿನ ಶಿಲ್ಪಾ ಪ್ರಭಾಕರ್  ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಅಧಿಕಾರಿ

29/05/2021, 07:39

ಚಿಕ್ಕಬಳ್ಳಾಪುರ(reporterkarnataka news): ಕಾವೇರಿ ವಿಷಯದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೆ ಯಾವಾಗಲೂ ಮನಸ್ತಾಪ ಇದ್ದದ್ದೇ. ಈ ವಿಷಯ ಬಿಟ್ಟರೆ ಕನ್ನಡಿಗರು ಮತ್ತು ತಮಿಳರು ಅನ್ಯೋನ್ಯವಾಗಿಯೇ ಬದುಕು ಸಾಗಿಸುತ್ತಿದ್ದಾರೆ. ಇದೀಗ ಅಚ್ಚರಿಯ ವಿಷಯವೆಂದರೆ ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ ನಮ್ಮ ಅಪ್ಪಟ ಕನ್ನಡತಿ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯ ಶಿಲ್ಪಾ ಪ್ರಭಾಕರ್ ಅವರೇ ವಿಶೇಷ ಅಧಿಕಾರಿ. ಇವರು ನಿವೃತ್ತ ಪೊಲೀಸ್ ಅಧಿಕಾರಿ ಪ್ರಭಾಕರ್​ ಅವರ ಪುತ್ರಿ.

1981 ಆಗಸ್ಟ್ 31 ಗೌರಿಬಿದನೂರು ನಗರದಲ್ಲಿ ಜನಿಸಿದ ಶಿಲ್ಪಾ, ಪ್ರಾಥಮಿಕ ಹಾಗೂ ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ನ್ಯಾಷನಲ್ ಕಾಲೇಜ್​ನಲ್ಲಿ ಪೂರೈಸಿದರು. ಬೆಂಗಳೂರಿನಲ್ಲಿ ಎಲ್ ಎಲ್ ಬಿ ಪದವಿ ಪಡೆದರು.  ನಂತರ ಯುಪಿಎಸ್ ಸಿ ಪರೀಕ್ಷೆಗೆ ಕುಳಿತರು. ಅಲ್ಲಿ 46ನೇ ಸ್ಥಾನದೊಂದಿಗೆ ಉತ್ತೀರ್ಣರಾಗಿದ್ದರು. 2018ರಲ್ಲಿ ತಮಿಳುನಾಡಿನ ತಿರುವನ್ವೇಲಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ನೇಮಕಗೊಂಡರು. ಅಂಗನವಾಡಿ ಕೇಂದ್ರಗಳನ್ನು ದೇಶದಲ್ಲಿಯೇ ಮಾದರಿ ಅಂಗನವಾಡಿ ಮಾಡಲು ನಿರ್ಧರಿಸಿ ತಮ್ಮ ಮೂರು ವರ್ಷದ ಹೆಣ್ಣುಮಗುವನ್ನು ಅಂಗನವಾಡಿಗೆ ಸೇರಿಸುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದರು. ಶಿಲ್ಪಾ ಅವರು ಮುಂದೆ ಎಂದೂ ತನ್ನ ವೃತ್ತಿ ಜೀವನದಲ್ಲಿ ಹಿಂತಿರುಗಿ ನೋಡಿಲ್ಲ. ಇದೀಗ ತಮಿಳುನಾಡು ಸಿಎಂ ನ ವಿಶೇಷ ಅಧಿಕಾರಿ.

ಇತ್ತೀಚಿನ ಸುದ್ದಿ

ಜಾಹೀರಾತು