2:00 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

 “ಅಪ್ಪೆ ಮಂತ್ರದೇವತೆ” ಟೈಟಲ್ ಲಾಂಚ್: ಶೀಘ್ರ ತೆರೆಗೆ

27/04/2022, 08:53

ಮಂಗಳೂರು(reporterkarnataka.com): “ಶ್ರೀ ಪ್ರಾಪ್ತಿ ಕಲಾವಿದೆರ್ ಕುಡ್ಲ” ಪೌರಾಣಿಕ /ಜನಪದ ನಾಟಕ  “ಅಪ್ಪೆ ಮಂತ್ರದೇವತೆ” ಶೀಘ್ರ ತೆರೆಗೆ ಬರಲಿದ್ದು,  ಟೈಟಲ್ ಲಾಂಚ್ ( ಶೀರ್ಷಿಕೆ ಬಿಡುಗಡೆ) ನೆರವೇರಿದೆ.

ಈ ಸಂದರ್ಭ ದಾಯ್ಜಿವರ್ಲ್ಡ್ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಪ್ರೊಡಕ್ಷನ್ ಮುಖ್ಯಸ್ಥ ಸ್ಟ್ಯಾನಿ ಬೇಳ, ಪ್ರಸಿದ್ಧ ಹಾಸ್ಯ ಕಲಾವಿದ ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಭಾಗವತ ಸುದೇಶ್ ಹೆಗ್ಡೆ ಕುತ್ತೆತ್ತೂರು, ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ., ಕೊರಿಯೊಗ್ರಾಫರ್ ಸುಹಾನ್ ಕುಳಾಯಿ ಇದ್ದರು.

ಪ್ರಶಾಂತ್ ಸಿ.ಕೆ. ರಚನೆ, ನಿರ್ದೇಶನದ ಮಂತ್ರದೇವತೆ ಪೌರಾಣಿಕ ನಾಟಕಕ್ಕೆ ಜಿತೇಂದ್ರ ಕುಂದೇಶ್ವರ ಹಾಗೂ ಸುಹಾನ್ ಕುಳಾಯಿ ಅವರ ಸಮಗ್ರ ನಿರ್ವಹಣೆ ಇರಲಿದೆ. ರಂಗದರಸೆ  ಜೆ.ಕೆ ರೈ ಪಿಲಾರ್  ಮೊದಲಾದ ಅಭಿಜಾತ ಕಲಾವಿದರ ಮೂಲಕ ತುಳು ರಂಗಭೂಮಿಗೆ ಧುಮುಕಲಿದೆ.

ನಾಟಕ ಪ್ರದರ್ಶನಗಳು:

ಪ್ರಶಾಂತ್ ಸಿಕೆ ರಚಿಸಿರುವ “ಮಲೆತ ಮೈಮೆ, ಸತ್ಯೊದ ಬಿರುವೆರ್ , ಕಾರ್ಣಿಕದ ತಂಗಡಿ ,

 ನವನೀತ್ ಶೆಟ್ಟಿ ಕದ್ರಿಯವರ ಅಪ್ಪೆ ಭಗವತಿ, ಮುಂತಾದ ಪೌರಾಣಿಕ/ಜನಪದ ನಾಟಕಗಳನ್ನು ಅದ್ಧೂರಿಯಲ್ಲಿ ಪ್ರದರ್ಶನ ಮಾಡಿದೆ. 

ನಂಕ್ ದಾಯೆ , ನಂಕ್ಲ ಕಾಲ ಬರು ,ಏರೆಗ್ ಗೊತ್ತು , ಪಚ್ಚು ಪಾತೆರೊಡು ,ಹಾಗೂ  ಹಲವಾರು ಸಾಮಾಜಿಕ ನಾಟಕಗಳನ್ನು ಈ ತಂಡ  ಯಶಸ್ವಿಯಾಗಿ ರಂಗದಲ್ಲಿ ಪ್ರದರ್ಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು