10:03 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

 “ಅಪ್ಪೆ ಮಂತ್ರದೇವತೆ” ಟೈಟಲ್ ಲಾಂಚ್: ಶೀಘ್ರ ತೆರೆಗೆ

27/04/2022, 08:53

ಮಂಗಳೂರು(reporterkarnataka.com): “ಶ್ರೀ ಪ್ರಾಪ್ತಿ ಕಲಾವಿದೆರ್ ಕುಡ್ಲ” ಪೌರಾಣಿಕ /ಜನಪದ ನಾಟಕ  “ಅಪ್ಪೆ ಮಂತ್ರದೇವತೆ” ಶೀಘ್ರ ತೆರೆಗೆ ಬರಲಿದ್ದು,  ಟೈಟಲ್ ಲಾಂಚ್ ( ಶೀರ್ಷಿಕೆ ಬಿಡುಗಡೆ) ನೆರವೇರಿದೆ.

ಈ ಸಂದರ್ಭ ದಾಯ್ಜಿವರ್ಲ್ಡ್ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಪ್ರೊಡಕ್ಷನ್ ಮುಖ್ಯಸ್ಥ ಸ್ಟ್ಯಾನಿ ಬೇಳ, ಪ್ರಸಿದ್ಧ ಹಾಸ್ಯ ಕಲಾವಿದ ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಭಾಗವತ ಸುದೇಶ್ ಹೆಗ್ಡೆ ಕುತ್ತೆತ್ತೂರು, ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ., ಕೊರಿಯೊಗ್ರಾಫರ್ ಸುಹಾನ್ ಕುಳಾಯಿ ಇದ್ದರು.

ಪ್ರಶಾಂತ್ ಸಿ.ಕೆ. ರಚನೆ, ನಿರ್ದೇಶನದ ಮಂತ್ರದೇವತೆ ಪೌರಾಣಿಕ ನಾಟಕಕ್ಕೆ ಜಿತೇಂದ್ರ ಕುಂದೇಶ್ವರ ಹಾಗೂ ಸುಹಾನ್ ಕುಳಾಯಿ ಅವರ ಸಮಗ್ರ ನಿರ್ವಹಣೆ ಇರಲಿದೆ. ರಂಗದರಸೆ  ಜೆ.ಕೆ ರೈ ಪಿಲಾರ್  ಮೊದಲಾದ ಅಭಿಜಾತ ಕಲಾವಿದರ ಮೂಲಕ ತುಳು ರಂಗಭೂಮಿಗೆ ಧುಮುಕಲಿದೆ.

ನಾಟಕ ಪ್ರದರ್ಶನಗಳು:

ಪ್ರಶಾಂತ್ ಸಿಕೆ ರಚಿಸಿರುವ “ಮಲೆತ ಮೈಮೆ, ಸತ್ಯೊದ ಬಿರುವೆರ್ , ಕಾರ್ಣಿಕದ ತಂಗಡಿ ,

 ನವನೀತ್ ಶೆಟ್ಟಿ ಕದ್ರಿಯವರ ಅಪ್ಪೆ ಭಗವತಿ, ಮುಂತಾದ ಪೌರಾಣಿಕ/ಜನಪದ ನಾಟಕಗಳನ್ನು ಅದ್ಧೂರಿಯಲ್ಲಿ ಪ್ರದರ್ಶನ ಮಾಡಿದೆ. 

ನಂಕ್ ದಾಯೆ , ನಂಕ್ಲ ಕಾಲ ಬರು ,ಏರೆಗ್ ಗೊತ್ತು , ಪಚ್ಚು ಪಾತೆರೊಡು ,ಹಾಗೂ  ಹಲವಾರು ಸಾಮಾಜಿಕ ನಾಟಕಗಳನ್ನು ಈ ತಂಡ  ಯಶಸ್ವಿಯಾಗಿ ರಂಗದಲ್ಲಿ ಪ್ರದರ್ಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು