11:56 PM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ: ಬಂಧಿತ ಯುವಕ ಕೋರ್ಟ್ ಕಟ್ಟಡದ 6 ಮಹಡಿಯಿಂದ ಜಿಗಿದು ಆತ್ಮಹತ್ಯೆ

31/08/2021, 19:56

ಮಂಗಳೂರು(reporterkarnataka.com): ಪೋಸ್ಕೊ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬರು ಕೋರ್ಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಕಿನ್ಯಾ ನಿವಾಸಿ ರವಿರಾಜ್‌ (31) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆ ಆರೋಪಿ ರವಿರಾಜ್‌‌‌‌ ಅವರನ್ನು ಬಂಧಿಸಲಾಗಿತ್ತು. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮನನೊಂದು ಜಿಲ್ಲಾ ನ್ಯಾಯಾಲಯದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ಇಂದು ಉಳ್ಳಾಲ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೊರಗೆ ತಂದು ಕುಳಿತಿರುವಂತೆ ಪೊಲೀಸರು ಸೂಚಿಸಿದ್ದರು. ಆತನ ಪರವಾಗಿ ಹಾಜರಾಗಿದ್ದ ವಕೀಲರು ರವಿರಾಜ್ ಬಳಿ ಮಾತನಾಡಿದ್ದು ಅಲ್ಲಿಯೇ ಇದ್ದರು‌. ಆದರೆ, ಅದೇ ವೇಳೆಗೆ ಹಠಾತ್ತಾಗಿ ಆರೋಪಿ ರವಿರಾಜ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಕೋರ್ಟ್ ಒಳಗಡೆಯೇ ಲಿಫ್ಟ್ ಇರುವ ಜಾಗದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾನೆ.

ಪ್ರಕರಣದಲ್ಲಿ ರವಿರಾಜ್, ತಾನೇನು ಹಾಗೆ ಮಾಡಿಲ್ಲ. ಪರಿಚಯದ ಹುಡುಗಿ ಎಂದು ಹತ್ತಿರ ಹೋಗಿದ್ದೆ ಎಂದು ವಕೀಲರಲ್ಲಿ ಹೇಳಿದ್ದರು. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಸೈಕಲಿನಲ್ಲಿ ಬಂದಿದ್ದ ಅನ್ಯಕೋಮಿನ ಹುಡುಗಿಯನ್ನು ಮುಟ್ಟಲು ಹೋಗಿದ್ದು ಸ್ಥಳೀಯರನ್ನು ಕೆರಳಿಸಿತ್ತು. ಸ್ಥಳೀಯರು ಸೇರಿ, ರವಿರಾಜ್ ಮೇಲೆ ಥಳಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರ ಕೈಗೆ ಒಪ್ಪಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ತಾನು ಮಾಡದ ತಪ್ಪಿಗೆ ಈ ರೀತಿ ಆಯ್ತಲ್ಲಾ ಎಂಬ ನೋವಿನಲ್ಲಿ ರವಿರಾಜ್ ಕೋರ್ಟ್ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು