5:26 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ: ಬಂಧಿತ ಯುವಕ ಕೋರ್ಟ್ ಕಟ್ಟಡದ 6 ಮಹಡಿಯಿಂದ ಜಿಗಿದು ಆತ್ಮಹತ್ಯೆ

31/08/2021, 19:56

ಮಂಗಳೂರು(reporterkarnataka.com): ಪೋಸ್ಕೊ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬರು ಕೋರ್ಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಕಿನ್ಯಾ ನಿವಾಸಿ ರವಿರಾಜ್‌ (31) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆ ಆರೋಪಿ ರವಿರಾಜ್‌‌‌‌ ಅವರನ್ನು ಬಂಧಿಸಲಾಗಿತ್ತು. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮನನೊಂದು ಜಿಲ್ಲಾ ನ್ಯಾಯಾಲಯದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ಇಂದು ಉಳ್ಳಾಲ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೊರಗೆ ತಂದು ಕುಳಿತಿರುವಂತೆ ಪೊಲೀಸರು ಸೂಚಿಸಿದ್ದರು. ಆತನ ಪರವಾಗಿ ಹಾಜರಾಗಿದ್ದ ವಕೀಲರು ರವಿರಾಜ್ ಬಳಿ ಮಾತನಾಡಿದ್ದು ಅಲ್ಲಿಯೇ ಇದ್ದರು‌. ಆದರೆ, ಅದೇ ವೇಳೆಗೆ ಹಠಾತ್ತಾಗಿ ಆರೋಪಿ ರವಿರಾಜ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಕೋರ್ಟ್ ಒಳಗಡೆಯೇ ಲಿಫ್ಟ್ ಇರುವ ಜಾಗದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾನೆ.

ಪ್ರಕರಣದಲ್ಲಿ ರವಿರಾಜ್, ತಾನೇನು ಹಾಗೆ ಮಾಡಿಲ್ಲ. ಪರಿಚಯದ ಹುಡುಗಿ ಎಂದು ಹತ್ತಿರ ಹೋಗಿದ್ದೆ ಎಂದು ವಕೀಲರಲ್ಲಿ ಹೇಳಿದ್ದರು. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಸೈಕಲಿನಲ್ಲಿ ಬಂದಿದ್ದ ಅನ್ಯಕೋಮಿನ ಹುಡುಗಿಯನ್ನು ಮುಟ್ಟಲು ಹೋಗಿದ್ದು ಸ್ಥಳೀಯರನ್ನು ಕೆರಳಿಸಿತ್ತು. ಸ್ಥಳೀಯರು ಸೇರಿ, ರವಿರಾಜ್ ಮೇಲೆ ಥಳಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರ ಕೈಗೆ ಒಪ್ಪಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ತಾನು ಮಾಡದ ತಪ್ಪಿಗೆ ಈ ರೀತಿ ಆಯ್ತಲ್ಲಾ ಎಂಬ ನೋವಿನಲ್ಲಿ ರವಿರಾಜ್ ಕೋರ್ಟ್ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು