11:28 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ : ಬೆಂಗಳೂರಿನ 510 ಪಬ್, ಬಾರ್‌ಗಳ ಮೇಲೆ ಸಿಸಿಬಿ ದಾಳಿ

10/09/2023, 14:49

ಬೆಂಗಳೂರು(reporterkarnataka.com): ಬೆಂಗಳೂರಿನ ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ.
ಪೊಲೀಸ್ ದಾಳಿ ವೇಳೆ ಕೆಲವು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ತಾವು ಎಂಎಲ್‌ಎ ಸಂಬಂಧಿಕರು ಎಂದು ಹೇಳಿಕೊಂಡು ವಾಗ್ವಾದ ನಡೆಸಿದ ಘಟನೆ ಕೂಡ ನಡೆದಿದೆ.
ಶುಕ್ರವಾರ ರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ 510ಕ್ಕೂ ಹೆಚ್ಚು ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ ಅಬಕಾರಿ ನಿಯಮ ಸೇರಿದಂತೆ ಕಾನೂನುಗಳನ್ನು ಉಲ್ಲಂಘನೆ ಮಾಡುತ್ತಿದ್ದ ಆರೋಪದ ಮೇಲೆ ಕೆಲ ಪಬ್‌ಗಳ ಮೇಲೆ ಕೇಸ್ ಜಡಿಯಲಾಗಿದೆ.
ಇತ್ತೀಚೆಗೆ ಶಾಲಾ ಮುಖ್ಯಸ್ಥರು ಪೊಲೀಸ್ ಆಯುಕ್ತರಿಗೆ ಮನವಿಯೊಂದನ್ನು ಕೊಟ್ಟಿದ್ದರು. ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ನೀಡಲಾಗುತ್ತಿದೆ. ಇದನ್ನು ಸರಿಪಡಿಸುವಂತೆ ಕೇಳಿಕೊಂಡಿದ್ದರು. ಈ ಬಗ್ಗೆ ಕಮಿಷನರ್ ಅವರಿಂದ ನಿರ್ದೇಶನ ಪಡೆದು ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿ, ತಪಾಸಣೆ ನಡೆಸಿ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಅನಧಿಕೃತವಾಗಿ ಪಬ್‌ಗಳಲ್ಲಿ ಧೂಮಪಾನಕ್ಕೆ ಅವಕಾಶ ಕೊಡಲಾಗಿದೆ. ಪ್ರತಿ ಪಬ್‌ಗಳಲ್ಲಿ ಧೂಮಪಾನಕ್ಕೆ ಪ್ರತ್ಯೇಕ ರೂಂ ವ್ಯವಸ್ಥೆ ಇರಬೇಕು. ಇದಲ್ಲದೆ ಅಬಕಾರಿ ನಿಯಮಗಳನ್ನು ಸಹ ಉಲ್ಲಂಘನೆ ಮಾಡಿದ್ದಾರೆ. ಅಪ್ರಾಪ್ತರಿಗೆ ಮದ್ಯ ನೀಡುತ್ತಿರೋದು ಕಂಡು ಬಂದಿದ್ದು, ಜುವೆನಿಲ್ ಜಸ್ಟಿಸ್ ಆಕ್ಟ್ ಹಾಗೂ ಕೋಪ್ಟಾ ಆಕ್ಟ್ ಅಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು