1:42 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ : ಬೆಂಗಳೂರಿನ 510 ಪಬ್, ಬಾರ್‌ಗಳ ಮೇಲೆ ಸಿಸಿಬಿ ದಾಳಿ

10/09/2023, 14:49

ಬೆಂಗಳೂರು(reporterkarnataka.com): ಬೆಂಗಳೂರಿನ ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ.
ಪೊಲೀಸ್ ದಾಳಿ ವೇಳೆ ಕೆಲವು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ತಾವು ಎಂಎಲ್‌ಎ ಸಂಬಂಧಿಕರು ಎಂದು ಹೇಳಿಕೊಂಡು ವಾಗ್ವಾದ ನಡೆಸಿದ ಘಟನೆ ಕೂಡ ನಡೆದಿದೆ.
ಶುಕ್ರವಾರ ರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ 510ಕ್ಕೂ ಹೆಚ್ಚು ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ ಅಬಕಾರಿ ನಿಯಮ ಸೇರಿದಂತೆ ಕಾನೂನುಗಳನ್ನು ಉಲ್ಲಂಘನೆ ಮಾಡುತ್ತಿದ್ದ ಆರೋಪದ ಮೇಲೆ ಕೆಲ ಪಬ್‌ಗಳ ಮೇಲೆ ಕೇಸ್ ಜಡಿಯಲಾಗಿದೆ.
ಇತ್ತೀಚೆಗೆ ಶಾಲಾ ಮುಖ್ಯಸ್ಥರು ಪೊಲೀಸ್ ಆಯುಕ್ತರಿಗೆ ಮನವಿಯೊಂದನ್ನು ಕೊಟ್ಟಿದ್ದರು. ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ನೀಡಲಾಗುತ್ತಿದೆ. ಇದನ್ನು ಸರಿಪಡಿಸುವಂತೆ ಕೇಳಿಕೊಂಡಿದ್ದರು. ಈ ಬಗ್ಗೆ ಕಮಿಷನರ್ ಅವರಿಂದ ನಿರ್ದೇಶನ ಪಡೆದು ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿ, ತಪಾಸಣೆ ನಡೆಸಿ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಅನಧಿಕೃತವಾಗಿ ಪಬ್‌ಗಳಲ್ಲಿ ಧೂಮಪಾನಕ್ಕೆ ಅವಕಾಶ ಕೊಡಲಾಗಿದೆ. ಪ್ರತಿ ಪಬ್‌ಗಳಲ್ಲಿ ಧೂಮಪಾನಕ್ಕೆ ಪ್ರತ್ಯೇಕ ರೂಂ ವ್ಯವಸ್ಥೆ ಇರಬೇಕು. ಇದಲ್ಲದೆ ಅಬಕಾರಿ ನಿಯಮಗಳನ್ನು ಸಹ ಉಲ್ಲಂಘನೆ ಮಾಡಿದ್ದಾರೆ. ಅಪ್ರಾಪ್ತರಿಗೆ ಮದ್ಯ ನೀಡುತ್ತಿರೋದು ಕಂಡು ಬಂದಿದ್ದು, ಜುವೆನಿಲ್ ಜಸ್ಟಿಸ್ ಆಕ್ಟ್ ಹಾಗೂ ಕೋಪ್ಟಾ ಆಕ್ಟ್ ಅಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು