1:11 PM Sunday26 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

30/09/2024, 19:41

ಮಂಗಳೂರು(reporterkarnataka.com): ಬೆಳ್ತಂಗಡಿಯ ಮಡಂತ್ಯಾರು ಬಳಿಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ.
ಎರಡನೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ಮನು ಕೆ. ಎಸ್. ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.
2023ರ ಜೂನ್‌ 23ರಂದು ಬಾಲಕಿಯನ್ನು ಆರೋಪಿಯು ಹುಟ್ಟು ಹಬ್ಬದ ನೆಪದಲ್ಲಿ ತಮ್ಮ ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಇರುವ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ನಾಗೇಶ್ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯ ಒಟ್ಟು 12 ಸಾಕ್ಷಿಗಳನ್ನು ವಿಚಾರಣೆ ಮಾಢಿತ್ತು. ಈ ಪ್ರಕರಣದಲ್ಲಿ 24 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು.
ಆರೋಪಿಯ ಪರವಾಗಿ ಆದಾಯ ತೆರಿಗೆಯ ವಿಶೇಷ ಅಭಿಯೋಜಕರೂ ಆಗಿರುವ ಹಿರಿಯ ನ್ಯಾಯವಾದಿ ಹರ್ಷ ಕುಮಾರ್ ಅವರು ವಾದ ಮಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು