12:45 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

30/09/2024, 19:41

ಮಂಗಳೂರು(reporterkarnataka.com): ಬೆಳ್ತಂಗಡಿಯ ಮಡಂತ್ಯಾರು ಬಳಿಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ.
ಎರಡನೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ಮನು ಕೆ. ಎಸ್. ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.
2023ರ ಜೂನ್‌ 23ರಂದು ಬಾಲಕಿಯನ್ನು ಆರೋಪಿಯು ಹುಟ್ಟು ಹಬ್ಬದ ನೆಪದಲ್ಲಿ ತಮ್ಮ ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಇರುವ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ನಾಗೇಶ್ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯ ಒಟ್ಟು 12 ಸಾಕ್ಷಿಗಳನ್ನು ವಿಚಾರಣೆ ಮಾಢಿತ್ತು. ಈ ಪ್ರಕರಣದಲ್ಲಿ 24 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು.
ಆರೋಪಿಯ ಪರವಾಗಿ ಆದಾಯ ತೆರಿಗೆಯ ವಿಶೇಷ ಅಭಿಯೋಜಕರೂ ಆಗಿರುವ ಹಿರಿಯ ನ್ಯಾಯವಾದಿ ಹರ್ಷ ಕುಮಾರ್ ಅವರು ವಾದ ಮಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು