8:20 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಯ ಹೊರಗೆ ಸುತ್ತಾಡಿಸಿದ ಆರೋಪ: ಬಂಧಿತ ಪಿಯು ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಸಮ್ಮತಿ

21/04/2022, 14:10

ಬೆಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹೆತ್ತವರ ಸಮ್ಮತಿ ಇಲ್ಲದೆ ಮನೆಯಿಂದ ಹೊರಗೆ ಕರೆದೊಯ್ದ ಆರೋಪದ ಮೇಲೆ ಬಂಧನಕ್ಕೊಳಗಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ರಾಜ್ಯ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಪ್ರಕರಣದ ಆರೋಪಿ ಬೆಂಗಳೂರು ನಿವಾಸಿಯಾಗಿದ್ದು, ದ್ವಿತೀಯ ಪಿಯು ವಿದ್ಯಾರ್ಥಿಗೆ ಇದೇ ಏಪ್ರಿಲ್ 22ರಿಂದ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆ ಬರೆಯಲು ಜಾಮೀನು ನೀಡಬೇಕು’ ಎಂದು ಕೋರಿ ಸಲ್ಲಿಸಿದ್ದ. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ ಆರೋಪಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ಆದೇಶಿಸಿದೆ.

ಆರೋಪಿಯು ಒಂದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಭದ್ರತೆ ಬಾಂಡ್‌ ನೀಡಬೇಕು. ಪರೀಕ್ಷೆ ಮುಗಿದ ನಂತರ ತಕ್ಷಣ ಮೇ 11ರ ಸಂಜೆ 6 ಗಂಟೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ವಯಂ ಶರಣಾಗಬೇಕು. ಪರೀಕ್ಷೆ ಬರೆಯಲು ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಬೇಕು. ಆರೋಪಿ ವಾಸ ಮಾಡುವ ವ್ಯಾಪ್ತಿ ಪ್ರದೇಶದ ಪೊಲೀಸ್‌ ಠಾಣೆಗೆ ತೆರಳಿ ಪ್ರತಿದಿನ ಸಂಜೆ 6 ಗಂಟೆಗೆ ಸಹಿ ಮಾಡಬೇಕು. ಸಾಕ್ಷಿ ನಾಶಕ್ಕೆ ಪ್ರಯತ್ನಿಸಬಾರದು. ಕೋರ್ಟ್ ಅನುಮತಿ ಇಲ್ಲದೆ ವ್ಯಾಪ್ತಿ ಪ್ರದೇಶ ಬಿಟ್ಟು ಹೊರಗೆ ಹೋಗಬಾರದು. ಒಂದೊಮ್ಮೆ ಆರೋಪಿ ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪ್ರಾಸಿಕ್ಯೂಷನ್‌ ಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಿದೆ.

ಈ ಕುರಿತು ಅಪ್ರಾಪ್ತ ವಯಸ್ಸಿನ 8ನೇ ತರಗತಿಯ ಬಾಲಕಿಯ ಅಕ್ಕ ದೂರು ನೀಡಿದ್ದಳು.

ಅಪ್ಪ–ಅಮ್ಮ ಮನೆಯಲ್ಲಿ ಇಲ್ಲದ ವೇಳೆ ನನ್ನ ತಂಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಆರೋಪಿಗಳು ಮನೆಯಿಂದ ಹೊರಗೆ ಕರೆದೊಯ್ದು ಸುತ್ತಾಡಿಸಿಕೊಂಡು ಬಂದಿದ್ದ. ಈ ವೇಳೆ ಮನೆಯೊಳಗೆ ಬಂದ ಅವರನ್ನು ಹೊರಹೋಗುವಂತೆ ಸೂಚಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದರು ಎಂದು ಸಂತ್ರಸ್ತೆಯ ಅಕ್ಕ ಏಪ್ರಿಲ್ 14ರಂದು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012ರ (ಪೊಕ್ಸೊ) ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 354, 354(ಡಿ), 323, 504 ಹಾಗೂ 34ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.tv

ಇತ್ತೀಚಿನ ಸುದ್ದಿ

ಜಾಹೀರಾತು