ಇತ್ತೀಚಿನ ಸುದ್ದಿ
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರೋಪಿಯನ್ನು ಸಂಘಟನೆಯಿಂದ ಹೊರ ದಬ್ಬಿದ ಬಜರಂಗ ದಳ
15/01/2023, 18:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporter Karnataka@gmail.com
ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಿಜೆಪಿ ಕಾರ್ಯಕರ್ತ ಎನ್ನಲಾದ ನಿತೇಶ್ ಎಂಬಾತನನ್ನು ಬಜರಂಗ ದಳ ಸಂಘಟನೆಯಿಂದ ಹೊರ ಹಾಕಲಾಗಿದೆ.
ನಿತೇಶ್ ನ ಕಿರುಕುಳಕ್ಕೆ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ನಡೆಸಿದ ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ನಿತೇಶ್ ನನ್ನು ಜಜರಂಗ ದಳದಿಂದ ಹೊರ ಹಾಕಲಾಗಿದೆ. ನಿತೇಶ್ ಬಜರಂಗದಳ ಸಂಸೆ ಘಟಕದ ಸಂಯೋಜಕನಾಗಿ ಕಾರ್ಯನಿರ್ವಹಿಸುತ್ತಿದ್ದ. ನಿತೇಶ್ ಗೂ ಬಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಂಘಟನೆ ಈಗ ಹೇಳಿಕೊಂಡಿದೆ.
ನಿತೇಶ್ ಕಿರುಕುಳಕ್ಕೆ ಕ್ರಿಮಿನಾಶಕ ಸೇವಿಸಿ ವಿದ್ಯಾರ್ಥಿ ನಿ ದೀಪ್ತಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ ಆಕೆಯನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಇದಕ್ಕೆ ಮುನ್ನ ಆಸ್ಪತ್ರೆಯಲ್ಲೇ ಲಿಖಿತ ಹೇಳಿಕೆ ದಾಖಲಿಸಿದ್ದಳು.