3:22 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅರಬ್ಬೀ ಸಮುದ್ರದ ಅಲೆಗಳ ನಿನಾದ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ 50 ಬೋಟ್ ಗಳಲ್ಲಿ ಮೊಳಗಿದ ಕೋಟಿ ಕಂಠ ಗಾಯನ

29/10/2022, 10:44

ಮಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನವು ಮಂಗಳೂರು ನಗರದಲ್ಲಿ ಕೂಡ ಅರ್ಥಪೂರ್ಣವಾಗಿ ನಡೆಯಿತು.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಅರಬ್ಬಿ ಸಮುದ್ರದ ಅಲೆಗಳ ನಿನಾದದಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಕಡಲಯಾನದಲ್ಲಿ ಕೋಟಿ ಕಂಠ ಗಾಯನ ಸೊಗಸಾಗಿ ಮೂಡಿ ಬಂತು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರ ಮುಂದಾಳತ್ವದಲ್ಲಿ ಮೀನುಗಾರಿಕಾ ಇಲಾಖೆ, ಮೊಗವೀರ ಸಮಾಜದ ಸಹಯೋಗದಲ್ಲಿ ಈ ಕೋಟಿ ಕಂಠ ಗಾಯನ ಮೂಡಿ ಬಂತು.‌ ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಹೊರಟ ಬೋಟ್ ಗಳು ತೋಟ ಬೆಂಗ್ರೆ ಅಳಿವೆ ಬಾಗಿಲುವರೆಗೆ 8ಕಿ.ಮೀ. ಸಾಗುವ ಮೂಲಕ‌ ಕನ್ನಡದ ಆರು ಹಾಡುಗಳನ್ನು ಹಾಡಲಾಯಿತು. 5 ಪರ್ಸಿನ್ ಬೋಟ್ ಗಳು, 10 ಆಳ ಸಮುದ್ರ ಮೀನುಗಾರಿಕಾ ಬೋಟ್ ಗಳು, 25 ನಾಡದೋಣಿ ಗಳು, 10 ಕರೆ ಫಿಶ್ಶಿಂಗ್ ಬೋಟ್ ಗಳು ಹಾಗೂ 4 ಫೆರಿ ಬೋಟ್ ಗಳಲ್ಲಿ ಕೋಟಿ ಕಂಠಗಾಯನ ಮೂಡಿತು. ಎಲ್ಲಾ ಬೋಟ್ ಗಳ ಸಂಪೂರ್ಣ ಶೃಂಗಾರಗೊಂಡು ಕನ್ನಡದ ಬಾವುಟಗಳಿಂದ ರಾರಾಜಿಸಿತ್ತು. ಸಮುದ್ರ ನಡುವಿನ ಸೊಗಸನ್ನು ವೀಕ್ಷಿಸುತ್ತ ಬೋಟ್ ಗಳ ಭರ್ತಿ ಜನರೊಂದಿಗೆ ಕೋಟಿ ಕಂಠಗಾಯನ ಮೂಡಿತು. ತುಳು ಬಾವುಟವೂ ರಾರಾಜಿಸಿದ್ದು ವಿಶೇಷವೆನಿಸಿತು.


ಈ ಸಂದರ್ಭ ಮಾತನಾಡಿದ ಶಾಸಕ ಕಾಮತ್, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಮಾರ್ಗದರ್ಶನದಂತೆ ಕೋಟಿ ಕಂಠ ಗಾಯನವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಇದೊಂದು ಮಹತ್ವದ ದಿನವಾಗಿ ನಾಡಿನ ಜನತೆಯ ಮನದಾಳದಲ್ಲಿ ಸದಾ ಉಳಿಯಲಿದೆ ಎಂದರು.
ದೋಣಿಗಳ ಮೂಲಕ ಸಾಗಿ ಸಮದ್ರದ ನಡುವೆ ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಹಾಡಲಾಯಿತು. ಕನ್ನಡ ಧ್ವಜಗಳೊಂದಿಗೆ ತುಳು ಧ್ವಜವನ್ನೂ ಹಾರಿಸಲಾಗಿದ್ದು ಜೊತೆಗೆ ಕನ್ನಡ ಹಾಡುಗಳ ನಂತರ ತುಳು ಹಾಡನ್ನು ಕೂಡ ಹಾಡುವ ಮೂಲಕ ಒಕ್ಕೂಟ ವ್ಯವಸ್ಥೆಯ ತತ್ವವನ್ನು ಸಾರಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು.

11 ಗಂಟೆಗೆ ಬೋಟ್ ಗಳಲ್ಲಿ ಕೋಟಿ ಕಂಠ ಗಾಯನದ ಮೊದಲ ಹಾಡು ಆರಂಭವಾಗಿ ಆರು ಹಾಡುಗಳು ಸೊಗಸಾಗಿ ಮೂಡಿ ಬಂತು. ಕೊನೆಗೆ ತುಳು ಭಾಷೆಯ ಹಾಡನ್ನು ಹಾಡಲಾಯಿತು. ಮಂಗಳೂರು ಮನಪಾ ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮನಪಾ ಸದಸ್ಯರು, ಮೀನುಗಾರಿಕಾ ಇಲಾಖಾ ಅಧಿಕಾರಿಗಳು, ಆಸಕ್ತರು ಸೇರಿದಂತೆ 500 ಕ್ಕೂ ಅಧಿಕ ಮಂದಿ ಈ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದರು. ಅಲ್ಲದೆ ಕೋಟಿ ಕಂಠ ಗಾಯನಕ್ಕೂ ಮುನ್ನ ಸುಲ್ತಾನ್ ಬತ್ತೇರಿಯ ಕಡಲ ಕಿನಾರೆಯಲ್ಲಿ ಕರಾವಳಿ‌ಸಂಗೀತ ಕಲಾವಿದರ ಒಕ್ಕೂಟದ ಸದಸ್ಯರಿಂದ ಸಮೂಹಗಾನ, ದೇಶಭಕ್ತಿಗೀತೆ, ನಾಡಗೀತೆಗಳ ಗಾಯನ‌ ನೆರವೇರಿತು‌.‌

ಇತ್ತೀಚಿನ ಸುದ್ದಿ

ಜಾಹೀರಾತು