7:33 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಅರಬ್ಬಿ ಸಮುದ್ರದತ್ತ ಮೋಡ; ನೈಋತ್ಯ ಮುಂಗಾರು ಮತ್ತೆ ವಿಳಂಬ ಸಾಧ್ಯತೆ: ಹವಾಮಾನ ಇಲಾಖೆ

27/05/2022, 20:19

ತಿರುವನಂತಪುರ(reporterkarnataka.com): ನೈಋತ್ಯ ಮುಂಗಾರು ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಅಂಡಮಾನ್‌ಗೆ ತಲುಪಿರುವ ಮಾನ್ಸೂನ್ ನೈಋತ್ಯ ದಿಕ್ಕಿನಲ್ಲಿ ಅರಬ್ಬಿ ಸಮುದ್ರದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಮಾರುತಗಳು ಸ್ಥಿರತೆ ಮತ್ತು ವೇಗವನ್ನು ಪಡೆದರೆ ಮಾತ್ರ ಕೇರಳಕ್ಕೆ ಮಾನ್ಸೂನ್ ಆಗಮನದ ಪರಿಸ್ಥಿತಿಗಳು ಅನುಕೂಲಕರವಾಗುತ್ತವೆ ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ

ನೈಋತ್ಯ ಮತ್ತು ಆಗ್ನೇಯ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್, ಕೊಮೊರಿನ್, ದಕ್ಷಿಣ, ಪೂರ್ವ-ಮಧ್ಯ ಮತ್ತು ಬಂಗಾಳ ಕೊಲ್ಲಿಯ ಈಶಾನ್ಯ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಮುಂದಿನ 48 ಗಂಟೆಗಳಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿವೆ.

ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ ತಿಳಿಸಿದೆ.

ಜೂನ್ ತಿಂಗಳಿನಿಂದ ಸೆಪ್ಟೆಂಬರ್‌ವರೆಗೆ ಮಾನ್ಸೂನ್‌ ಅವಧಿಯಲ್ಲಿ ದೇಶಾದ್ಯಂತ ಸಾಮಾನ್ಯ ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶೇಕಡಾ 75ರಷ್ಟು ಮಳೆಯಾಗುವ ನಿರೀಕ್ಷೆ ಇದೆ

ಇತ್ತೀಚಿನ ಸುದ್ದಿ

ಜಾಹೀರಾತು