2:24 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಆರಾಧ್ಯ ಮಠ: ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ

06/01/2024, 19:50

ಮಂಗಳೂರು (reporterkarnataka com):ಮಿಲಾಗ್ರಿಸ್ ಇಲ್ಲಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ.

ಮೂವರು ಧರ್ಮ ಭಗಿನಿಯರಿಗೆ ಮಠದ ಉಡುಗೆಗಳನ್ನು ನೀಡಲಾಯಿತು. ಸಿ| ಮೇರಿ ಫ್ರಾನ್ಸಿಸ್ ವಾಗ್ದಾನ ಸ್ವೀಕರಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್ ವಂ| ರೆ| ಡಾ| ಅಲೋಶಿಯಸ್ ಪೌಲ್ ಡಿಸೋಜ ಧಾರ್ಮಿಕ ವಿಧಿಗಳೊಂದಿಗೆ ಬಲಿಪೂಜೆ ನೆರವೇರಿಸಿದರು. ಜೈಲ್ ರೋಡ್ ನ ಸಂತ ಅನ್ನ ಫ್ರಾಯರಿಯ ಮುಖ್ಯಾಧಿಕಾರಿ ವಂ| ರೋಕಿ ಡಿ’ಕುನ್ಹಾ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಈ ಮಠಕ್ಕೆ ಸೇರ್ಪಡೆಗೊಂಡ ಬಳಿಕ ಧರ್ಮ ಭಗಿನಿಯರು ಸಮಾಜದೊಂದಿಗೆ ಬೆರೆತುಕೊಳ್ಳದೆ ಮಠದೊಳಗೆಯೇ ಇದ್ದು, ಲೋಕ ಕಲ್ಯಾಣಕ್ಕಾಗಿ ನಿರಂತರ ಪ್ರಾರ್ಥಿಸುತ್ತಾರೆ. ಮಠದೊಳಗೆ ಇರುವುದರಿಂದ ಇವರನ್ನು ಭಿತರ್ಲಿ ಮಾದ್ರಿ’ (ಮಠದೊಳಗಿನ ಧರ್ಮ ಭಗಿನಿಯರು) ಎಂದು ಕರೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು