3:21 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಆರಾಧ್ಯ ಮಠ: ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ

06/01/2024, 19:50

ಮಂಗಳೂರು (reporterkarnataka com):ಮಿಲಾಗ್ರಿಸ್ ಇಲ್ಲಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ.

ಮೂವರು ಧರ್ಮ ಭಗಿನಿಯರಿಗೆ ಮಠದ ಉಡುಗೆಗಳನ್ನು ನೀಡಲಾಯಿತು. ಸಿ| ಮೇರಿ ಫ್ರಾನ್ಸಿಸ್ ವಾಗ್ದಾನ ಸ್ವೀಕರಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್ ವಂ| ರೆ| ಡಾ| ಅಲೋಶಿಯಸ್ ಪೌಲ್ ಡಿಸೋಜ ಧಾರ್ಮಿಕ ವಿಧಿಗಳೊಂದಿಗೆ ಬಲಿಪೂಜೆ ನೆರವೇರಿಸಿದರು. ಜೈಲ್ ರೋಡ್ ನ ಸಂತ ಅನ್ನ ಫ್ರಾಯರಿಯ ಮುಖ್ಯಾಧಿಕಾರಿ ವಂ| ರೋಕಿ ಡಿ’ಕುನ್ಹಾ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಈ ಮಠಕ್ಕೆ ಸೇರ್ಪಡೆಗೊಂಡ ಬಳಿಕ ಧರ್ಮ ಭಗಿನಿಯರು ಸಮಾಜದೊಂದಿಗೆ ಬೆರೆತುಕೊಳ್ಳದೆ ಮಠದೊಳಗೆಯೇ ಇದ್ದು, ಲೋಕ ಕಲ್ಯಾಣಕ್ಕಾಗಿ ನಿರಂತರ ಪ್ರಾರ್ಥಿಸುತ್ತಾರೆ. ಮಠದೊಳಗೆ ಇರುವುದರಿಂದ ಇವರನ್ನು ಭಿತರ್ಲಿ ಮಾದ್ರಿ’ (ಮಠದೊಳಗಿನ ಧರ್ಮ ಭಗಿನಿಯರು) ಎಂದು ಕರೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು