3:03 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಆರಾಧ್ಯ ಮಠ: ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ

06/01/2024, 19:50

ಮಂಗಳೂರು (reporterkarnataka com):ಮಿಲಾಗ್ರಿಸ್ ಇಲ್ಲಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ.

ಮೂವರು ಧರ್ಮ ಭಗಿನಿಯರಿಗೆ ಮಠದ ಉಡುಗೆಗಳನ್ನು ನೀಡಲಾಯಿತು. ಸಿ| ಮೇರಿ ಫ್ರಾನ್ಸಿಸ್ ವಾಗ್ದಾನ ಸ್ವೀಕರಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್ ವಂ| ರೆ| ಡಾ| ಅಲೋಶಿಯಸ್ ಪೌಲ್ ಡಿಸೋಜ ಧಾರ್ಮಿಕ ವಿಧಿಗಳೊಂದಿಗೆ ಬಲಿಪೂಜೆ ನೆರವೇರಿಸಿದರು. ಜೈಲ್ ರೋಡ್ ನ ಸಂತ ಅನ್ನ ಫ್ರಾಯರಿಯ ಮುಖ್ಯಾಧಿಕಾರಿ ವಂ| ರೋಕಿ ಡಿ’ಕುನ್ಹಾ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಈ ಮಠಕ್ಕೆ ಸೇರ್ಪಡೆಗೊಂಡ ಬಳಿಕ ಧರ್ಮ ಭಗಿನಿಯರು ಸಮಾಜದೊಂದಿಗೆ ಬೆರೆತುಕೊಳ್ಳದೆ ಮಠದೊಳಗೆಯೇ ಇದ್ದು, ಲೋಕ ಕಲ್ಯಾಣಕ್ಕಾಗಿ ನಿರಂತರ ಪ್ರಾರ್ಥಿಸುತ್ತಾರೆ. ಮಠದೊಳಗೆ ಇರುವುದರಿಂದ ಇವರನ್ನು ಭಿತರ್ಲಿ ಮಾದ್ರಿ’ (ಮಠದೊಳಗಿನ ಧರ್ಮ ಭಗಿನಿಯರು) ಎಂದು ಕರೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು