7:31 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಆರಾಧ್ಯ ಮಠ: ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ

06/01/2024, 19:50

ಮಂಗಳೂರು (reporterkarnataka com):ಮಿಲಾಗ್ರಿಸ್ ಇಲ್ಲಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ.

ಮೂವರು ಧರ್ಮ ಭಗಿನಿಯರಿಗೆ ಮಠದ ಉಡುಗೆಗಳನ್ನು ನೀಡಲಾಯಿತು. ಸಿ| ಮೇರಿ ಫ್ರಾನ್ಸಿಸ್ ವಾಗ್ದಾನ ಸ್ವೀಕರಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್ ವಂ| ರೆ| ಡಾ| ಅಲೋಶಿಯಸ್ ಪೌಲ್ ಡಿಸೋಜ ಧಾರ್ಮಿಕ ವಿಧಿಗಳೊಂದಿಗೆ ಬಲಿಪೂಜೆ ನೆರವೇರಿಸಿದರು. ಜೈಲ್ ರೋಡ್ ನ ಸಂತ ಅನ್ನ ಫ್ರಾಯರಿಯ ಮುಖ್ಯಾಧಿಕಾರಿ ವಂ| ರೋಕಿ ಡಿ’ಕುನ್ಹಾ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಈ ಮಠಕ್ಕೆ ಸೇರ್ಪಡೆಗೊಂಡ ಬಳಿಕ ಧರ್ಮ ಭಗಿನಿಯರು ಸಮಾಜದೊಂದಿಗೆ ಬೆರೆತುಕೊಳ್ಳದೆ ಮಠದೊಳಗೆಯೇ ಇದ್ದು, ಲೋಕ ಕಲ್ಯಾಣಕ್ಕಾಗಿ ನಿರಂತರ ಪ್ರಾರ್ಥಿಸುತ್ತಾರೆ. ಮಠದೊಳಗೆ ಇರುವುದರಿಂದ ಇವರನ್ನು ಭಿತರ್ಲಿ ಮಾದ್ರಿ’ (ಮಠದೊಳಗಿನ ಧರ್ಮ ಭಗಿನಿಯರು) ಎಂದು ಕರೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು