1:56 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಆರಗ ಜ್ಞಾನೇಂದ್ರ ಅವರು ವಿವೇಚನೆ ಇಲ್ಲದೆ ಅಧಿಕಾರಿಗಳ ಜೊತೆಗೆ ಏಕವಚನದಲ್ಲಿ ಮಾತನಾಡುತ್ತಾರೆ: ಕಿಮ್ಮನೆ ರತ್ನಾಕರ್

14/07/2025, 19:23

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳ ಜೊತೆಗೆ ಮಾತನಾಡುವ ರೀತಿ ತೀರಾ ಧೋರಣೆಯಿಂದ ಕೂಡಿದ್ದಾಗಿದೆ. ಏಕವಚನದಲ್ಲಿ ಮಾತನಾಡುವಂತಹದ್ದು, ಅಧಿಕಾರಿಗಳಿಗೆ ಬಯ್ಯುವಂತಹದ್ದು, ದಲಿತ ಸಮಾಜಕ್ಕೆ ಸೇರಿದ ಪಪಂ ಮುಖ್ಯ ಅಧಿಕಾರಿಗೆ ಬೈದಿದ್ದಾರೆ. ಅದು ಯಾವುದೊ ಒಳ್ಳೆಯ ಕೆಲಸಕ್ಕೆ ಆದರೆ ಬೇಸರವಿಲ್ಲ ಅದನ್ನು ಬಿಟ್ಟು ತಮ್ಮ ಬಿಜೆಪಿ ಕಾರ್ಯಕರ್ತರಿಗಾಗಿ ಮಾತನಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಸೋಮವಾರ ಪಟ್ಟಣದ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಸಾರ್ವಜನಿಕರ ಎದುರು ಓರ್ವ ಅಧಿಕಾರಿಗೆ ಹೊಟ್ಟೆಗೆ ಏನು ತಿನ್ನುತ್ತಿಯ ಎಂದು ಏಕ ವಚನದಲ್ಲಿ ಮಾತನಾಡುತ್ತಾರೆ. ವಿವೇಚನೆ ಇಲ್ಲದೆ ಮಾತನಾಡುತ್ತಾರೆ. ಅವರ ಸರ್ಕಾರ ಹಾಗೆ ಮಂತ್ರಿ ಇದ್ದಾಗ ಮಾತನಾಡುವುದು ಬೇರೆ ಆದರೆ ಈಗ ತಮಗೆ ಬೇಕಾದ ಹಾಗೆ ಮಾತನಾಡುವುದು ಸರಿಯಲ್ಲ, ಸರ್ಕಾರಿ ಕಾರ್ಯಕ್ರಮದಲ್ಲಿ ತಮ್ಮ ಪಕ್ಕದಲ್ಲಿ ಯಾರನ್ನೋ ತಂದು ಕೂರಿಸಿಕೊಳ್ಳುತ್ತಾರೆ. ನಾವು ಯಾವತ್ತೂ ಆ ರೀತಿ ಮಾಡಿಲ್ಲ. ಇವರ ಜೊತೆಗೆ ಇದ್ದವರು ಅಷ್ಟೇ ಮರ್ಯಾದೆ ಇಲ್ಲದೆ ಹೋಗಿ ಕೂರುತ್ತಾರೆ. ನಾವು ಅಧಿಕಾರಿಗಳಿಗೆ ಕಂಪ್ಲೇಂಟ್ ಮಾಡಲು ಹೇಳಿದ್ದೇನೆ ಇಲ್ಲದಿದ್ದರೆ ನಾವೇ ಕಂಪ್ಲೇಂಟ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
*ಆಸ್ಪತ್ರೆಯಲ್ಲಿ ಪ್ರತಿಭಟನೆ ಮಾಡುವ ಅವಶ್ಯಕತೆ ಏನಿತ್ತು?:* ಪಕ್ಷಾತೀತವಾಗಿ ಎಂದಿದ್ದಕ್ಕೆ ನಮ್ಮವರು ಹೋಗಿದ್ದಾರೆ. ಆದರೆ ನಾವು ಪಕ್ಷಾತೀತವಾಗಿ ಎಂದು ಪ್ರತಿಭಟನೆಗೆ ಕರೆದರೆ ಬರುತ್ತಾರಾ? ಬಿಜೆಪಿ ಅವರಿಗೆ ಮೋಸ ಮಾಡುವುದು ಹೇಳಿಕೊಡಬೇಕಾಗಿಲ್ಲ, ಆಸ್ಪತ್ರೆಯಲ್ಲಿ ದಶಕಗಳಿಂದ ಇರುವ ವೈದ್ಯರನ್ನು ವರ್ಗಾವಣೆ ಮಾಡಲಾಗಿದೆ. 48 ಗಂಟೆಯಾದರೂ ಬೇರೆ ವೈದ್ಯರು ಬಂದಿಲ್ಲ ಎಂದಾದರೆ ಪ್ರತಿಭಟನೆ ಮಾಡಿದ್ದರೆ ನಾನೆ ಸಹಕಾರ ನೀಡುತ್ತಿದ್ದೆ. ಆದರೆ ಅಷ್ಟೊಂದು ತಾರಾತುರಿ ಏನಿತ್ತು ಗೊತ್ತಿಲ್ಲ ಎಂದರು.
ಈ ಸಂದರ್ಭದಲ್ಲಿ ಶಚಿಂದ್ರ ಹೆಗಡೆ, ಮುಡುಬಾ ರಾಘವೇಂದ್ರ, ರಹಮತ್ ಉಲ್ಲಾ ಆಸಾದಿ, ಡಾ. ಸುಂದರೇಶ್, ಗೀತಾ ರಮೇಶ್, ಶಬನಮ್, ಮಂಜುಳಾ ನಾಗೇಂದ್ರ, ಸುಶೀಲ ಶೆಟ್ಟಿ ಸೇರಿ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು