7:51 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ: ಕಡವೆ ಶಿಖಾರಿ ಮಾಡಿದ್ದ ವ್ಯಕ್ತಿ ಬಂಧನ; ವಾಹನ, 2 ಕೋವಿ ವಶ

19/01/2025, 19:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ.
ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ 37 ರಲ್ಲಿ ಕೂತನ್ಕುಲ್ ಎಸ್ಟೇಟ್ ನಲ್ಲಿ ಇಂದು ನಸುಕಿನಲ್ಲಿ ತೋಟದ ರೈಟರ್ ದೇವಯ್ಯ ಕಡವೆ ಶಿಕಾರಿ ಮಾಡಿದ್ದ.
ಶಿಕಾರಿ ಬಳಿಕ ಮಾಂಸವನ್ನು ತುಂಡು ಮಾಡುತ್ತಿದ್ದಾಗ ಅರಣ್ಯ ಸಂಚಾರಿ ದಳದವರು ದಾಳಿ ಮಾಡಿ ದೇವಯ್ಯ ಅವರನ್ನು ಬಂಧಿಸಿ ವನ್ಯಜೀವಿ ಸಾಂಬಾರ್ ಜಿಂಕೆಯ ಅಂದಾಜು 40 ಕೆಜಿ ಮಾಂಸ ಮತ್ತು ಚರ್ಮ, ಚೂರಿ ಹಾಗೂ ಬೇಟೆಗೆ ಬಳಸುತ್ತಿದ್ದ 2 ರೈಫಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಒಂಟಿ ನಳಿಕೆ ರೈಫಲ್ ಹಾಗೂ ಐವತ್ತಕ್ಕೂ ಹೆಚ್ಚು ಜೀವಂತ ಬಳಸಿದ ಗುಂಡು ಪತ್ತೆಯಾಗಿದೆ. ವನ್ಯಜೀವಿ ಹಾಗೂ ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್, ವಲಯ ಅರಣ್ಯಾಧಿಕಾರಿ ವೆಂಕಟೇಶ್, ಉಪ ವಲಯ ಅರಣ್ಯಾಧಿಕಾರಿ ಪ್ರಹಾರ್ಶ್, ಪೂರಪ್ಪ ಮತ್ತು ಇತರರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು